<p><strong>ಬೆಳಗಾವಿ</strong>: ಕನ್ನಡ ವೈದ್ಯ ಬರಹಗಾರರ 5ನೇ ರಾಜ್ಯ ಸಮ್ಮೇಳನವು ಬೆಳಗಾವಿಯ ಕೆಎಲ್ಇ ಶತಮಾನೋತ್ಸವ ಭವನದ ಎಚ್.ಬಿ.ರಾಜಶೇಖರ ಸಭಾಂಗಣದಲ್ಲಿ ಆಗಸ್ಟ್ 24 ಮತ್ತು 25ರಂದು ನಡೆಯಲಿದೆ. ವೈದ್ಯ ಸಾಹಿತಿ ಡಾ. ನಾ.ಸೋಮೇಶ್ವರ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.</p><p>ಕೆಎಲ್ಇ ವಿಶ್ವವಿದ್ಯಾಲಯದ ಕನ್ನಡ ಬಳಗ, ಭಾರತೀಯ ವೈದ್ಯಕೀಯ ಸಂಘ ಹಾಗೂ ಕನ್ನಡ ವೈದ್ಯ ಬರಹಗಾರರ ಸಮಿತಿ ಸಹಯೋಗದಲ್ಲಿ ನಡೆಯುವ ಈ ಸಮ್ಮೇಳನವನ್ನು ಸಾಹಿತಿ ಜಯಂತ್ ಕಾಯ್ಕಿಣಿ ಉದ್ಘಾಟಿಸುವರು. ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆ ಅಧ್ಯಕ್ಷ ಡಾ.ಶ್ರೀನಿವಾಸ, ನಿಯೋಜಿತ ರಾಜ್ಯ ಘಟಕದ ಅಧ್ಯಕ್ಷ ಡಾ.ವಿ.ವಿ.ಚಿನಿವಾಲರ, ಕೆಎಲ್ಇ ವಿಶ್ವವಿದ್ಯಾಲಯದ ಕುಲಪತಿ ಡಾ.ನಿತಿನ್ ಗಂಗನೆ ಮತ್ತು ಪ್ರಮುಖರು ಪಾಲ್ಗೊಳ್ಳುವರು.</p><p>‘ಕನ್ನಡ ವೈದ್ಯ ಸಾಹಿತ್ಯದ ಕುರಿತು 8 ಗೋಷ್ಠಿಗಳು, ಕಾವ್ಯ ಮತ್ತು ಕಥಾ ಕಾರ್ಯಾಗಾರ, ವೈದ್ಯ ಕವಿಗೋಷ್ಠಿ, ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ’ ಎಂದು ಸಮ್ಮೇಳನದ ಕಾರ್ಯದರ್ಶಿ ಡಾ.ಅವಿನಾಶ ಕವಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಕನ್ನಡ ವೈದ್ಯ ಬರಹಗಾರರ 5ನೇ ರಾಜ್ಯ ಸಮ್ಮೇಳನವು ಬೆಳಗಾವಿಯ ಕೆಎಲ್ಇ ಶತಮಾನೋತ್ಸವ ಭವನದ ಎಚ್.ಬಿ.ರಾಜಶೇಖರ ಸಭಾಂಗಣದಲ್ಲಿ ಆಗಸ್ಟ್ 24 ಮತ್ತು 25ರಂದು ನಡೆಯಲಿದೆ. ವೈದ್ಯ ಸಾಹಿತಿ ಡಾ. ನಾ.ಸೋಮೇಶ್ವರ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.</p><p>ಕೆಎಲ್ಇ ವಿಶ್ವವಿದ್ಯಾಲಯದ ಕನ್ನಡ ಬಳಗ, ಭಾರತೀಯ ವೈದ್ಯಕೀಯ ಸಂಘ ಹಾಗೂ ಕನ್ನಡ ವೈದ್ಯ ಬರಹಗಾರರ ಸಮಿತಿ ಸಹಯೋಗದಲ್ಲಿ ನಡೆಯುವ ಈ ಸಮ್ಮೇಳನವನ್ನು ಸಾಹಿತಿ ಜಯಂತ್ ಕಾಯ್ಕಿಣಿ ಉದ್ಘಾಟಿಸುವರು. ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆ ಅಧ್ಯಕ್ಷ ಡಾ.ಶ್ರೀನಿವಾಸ, ನಿಯೋಜಿತ ರಾಜ್ಯ ಘಟಕದ ಅಧ್ಯಕ್ಷ ಡಾ.ವಿ.ವಿ.ಚಿನಿವಾಲರ, ಕೆಎಲ್ಇ ವಿಶ್ವವಿದ್ಯಾಲಯದ ಕುಲಪತಿ ಡಾ.ನಿತಿನ್ ಗಂಗನೆ ಮತ್ತು ಪ್ರಮುಖರು ಪಾಲ್ಗೊಳ್ಳುವರು.</p><p>‘ಕನ್ನಡ ವೈದ್ಯ ಸಾಹಿತ್ಯದ ಕುರಿತು 8 ಗೋಷ್ಠಿಗಳು, ಕಾವ್ಯ ಮತ್ತು ಕಥಾ ಕಾರ್ಯಾಗಾರ, ವೈದ್ಯ ಕವಿಗೋಷ್ಠಿ, ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ’ ಎಂದು ಸಮ್ಮೇಳನದ ಕಾರ್ಯದರ್ಶಿ ಡಾ.ಅವಿನಾಶ ಕವಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>