ಜಿಲ್ಲಾ ಕೋಟಾದಲ್ಲಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಅರಭಾವಿಯ ಬಯಲಾಟ ಕಲಾವಿದೆ ಕೆಂಪವ್ವ ಹರಿಜನ ಅವರನ್ನು ಆಯ್ಕೆ ಮಾಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಆಯ್ಕೆಯಾಗಿರುವ ಅಶೋಕ ಶೆಟ್ಟರ್ ಸದ್ಯ ಹುಬ್ಬಳ್ಳಿಯಲ್ಲಿದ್ದಾರೆ. ಅವರ ಮೂಲ ಬಾಗಲಕೋಟೆ ಎನ್ನಲಾಗುತ್ತಿದೆ. ಸಂಗೀತ ಕ್ಷೇತ್ರದಲ್ಲಿ ಪರಿಗಣಿಸಲಾದ ಅನಂತ ತೇರದಾಳ ಅವರು ಕೂಡ ಬಾಗಲಕೋಟೆ ಜಿಲ್ಲೆಯವರು, ಸದ್ಯ ಪುಣೆಯಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಆಯ್ಕೆಯಾಗಿರುವ ರಾಮಣ್ಣ ಬ್ಯಾಟಿ ಅವರನ್ನು ಗದಗ ಜಿಲ್ಲೆಯ ಕೋಟಾಕ್ಕೆ ಸೇರಿಸಲಾಗಿದೆ. ಆದರೆ, ಅವರು ಬೆಳಗಾವಿ ಜಿಲ್ಲೆಯವರು ಎಂದು ತಿಳಿದುಬಂದಿದೆ.