ಈ ಬಗ್ಗೆ ಸೋಮವಾರ ಪ್ರಕಟಣೆ ನೀಡಿರುವ ಅವರು, ‘ಸುಪ್ರೀಂ ಕೋರ್ಟ್ ಆದೇಶದಂತೆ ಲಾಕ್ಡೌನ್ ಅವಧಿಯಲ್ಲಿ ಕಟ್ಟಡ ಕಾರ್ಮಿಕರಿಗೆ ವಿತರಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 2,500 ದಿನಸಿ ಕಿಟ್ಗಳನ್ನು ಕಾರ್ಮಿಕ ಕಲ್ಯಾಣ ಮಂಡಳಿ ಕಳುಹಿಸಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಅಥವಾ ಶಾಸಕರು ವಿತರಿಸಬೇಕಾದ ಕಿಟ್ಗಳನ್ನು ನಗರದಲ್ಲಿನ ಬಿಜೆಪಿ ಕಾರ್ಯಕರ್ತರು ವಿತರಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.