‘ಕಾಲೇಜಿನಲ್ಲಿದ್ದಾಗ ಸತೀಶ ಎಬಿವಿಪಿ ಅಧ್ಯಕ್ಷರಾಗಿದ್ದರು’ ಎಂಬ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಕಾಲೇಜಿನಲ್ಲಿದ್ದಾಗ ಪ್ರತಿ ವರ್ಷ ಒಬ್ಬರನ್ನು ನಾಯಕರನ್ನಾಗಿ ಮಾಡುತ್ತಿದ್ದರು. ನಾನೂ ಆಗಿದ್ದೆ. ಬಿಜೆಪಿಗೂ ಜನ ಸಂಘಕ್ಕೂ ಆಗ ಸಂಬಂಧವಿರಲಿಲ್ಲ. ಹಿಂದೆ ಜನ ಸಂಘದ ಕಾರ್ಯಕ್ರಮ ನೋಡಲು ಊರಿಗೆ ಊರೇ ಹೋಗುತ್ತಿತ್ತು. ಕ್ರಮೇಣ ಅದರ ಹೋರಾಟ, ವಿಚಾರಗಳಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ಹೀಗಾಗಿ ನಾನು ಅಧ್ಯಕ್ಷನಾಗಿದ್ದೆ ಎನ್ನುವುದು ಮುಖ್ಯ ಆಗುವುದಿಲ್ಲ’ ಎಂದರು.