<p>ಪ್ರಜಾವಾಣಿ ವಾರ್ತೆ</p>.<p>ಮೂಡಲಗಿ: ‘ಕಾಂಗ್ರೆಸ್ನ ಹಗರಣಗಳು, ಮಂತ್ರಿಗಳ ಜಗಳ, ಅರಾಜಕತೆ, ಆರ್ಥಿಕ ಸಂಕಷ್ಟಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ. ಕಾಂಗ್ರೆಸ್ ಶಾಸಕರೆ ಸರ್ಕಾರದ ಕಾರ್ಯ ವೈಖರಿಗಳ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದ ಜನ ಅಭಿವೃದ್ಧಿ ಪರವಾದ ಸರ್ಕಾರ ಬಯಸುತ್ತಿದ್ದಾರೆ’ ಎಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಹೇಳಿದರು.</p>.<p>ತಾಲ್ಲೂಕಿನ ಹಳ್ಳೂರ ಗ್ರಾಮದ ಹಳ್ಳದರಂಗ ದೇವಸ್ಥಾನ ಹತ್ತಿರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ₹ 50 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣದ ಮುಂದುವರೆದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಈಗಾಗಲೇ ಹಳ್ಳೂರ ಗ್ರಾಮಕ್ಕೆ ರಾಜ್ಯಸಭಾ ಸಂಸದರ ನಿಧಿಯಿಂದ ಹಳ್ಳದರಂಗ ಸಮುದಾಯ ಭವನಕ್ಕೆ ₹50 ಲಕ್ಷ , ಚಂದ್ರವ್ವದೇವಿ ಸಮುದಾಯ ಭವನ, ಮಲ್ಲಿಕಾರ್ಜುನ ಸಮುದಾಯ ಭವನ, ಗಾಂಧಿ ನಗರದ ಬಸವೇಶ್ವರ ಸಮುದಾಯ ಭವನ, ಆದಿನಾಥ ಸಮುದಾಯ ಭವನಕ್ಕೆ, ಬಸ್ ಪ್ರಯಾಣಿಕರ ತಂಗುದಾಣಕ್ಕೆ ತಲಾ ₹5 ಲಕ್ಷ ವಿತರಿಸಲಾಗಿದೆ. ಯುವಕರ ಅನುಕೂಲಕ್ಕಾಗಿ ಗ್ರಾಮದಲ್ಲಿ ಓಪನ್ ಜಿಮ್ ಸೌಲಭ್ಯ ಒದಗಿಸಲುಪ್ರಯತ್ನಿಸುವೆ ಎಂದರು.</p>.<p>ಇದೇ ಸಂದರ್ಭದಲ್ಲಿ ಗ್ರಾಮದ ಚನ್ನಮ್ಮ ವೃತ್ತದ ಹತ್ತಿರ ಬಸ್ ಪ್ರಯಾಣಿಕರ ತಂಗುದಾಣಕ್ಕೆ ಪೂಜೆ ನೇರವೇರಿಸಿದರು.ನಂತರ ಚಂದ್ರವ್ವದೇವಿ ದೇವಸ್ಥಾನದ ಹತ್ತಿರ ನಿರ್ಮಾಣಗೊಂಡ ಸಮುದಾಯ ಭವನ ಕಟ್ಟಡ ಉದ್ಘಾಟಿಸಿದರು.</p>.<p>ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲವ್ವ ಹೊಸಟ್ಟಿ, ಸದಸ್ಯರಾದ ಸದಾಶಿವ ಮಾವರಕರ, ಪ್ರಮುಖರಾದ ಬಸವಣೆಪ್ಪ ಡಬ್ಬನ್ನವರ, ಶಂಕರ ಲೋಕನ್ನವರ, ಕುಮಾರ ಲೋಕನ್ನವರ, ಶಿವಪ್ಪ ಕೌಜಲಗಿ, ಶ್ರೀಕಾಂತ ಕೌಜಲಗಿ, ಸುರೇಶ ಮಗದುಮ್ಮ, ತುಕಾರಾಮ ಸನದಿ, ಮುತ್ತೆಪ್ಪ ಬೋಳನ್ನವರ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಮೂಡಲಗಿ: ‘ಕಾಂಗ್ರೆಸ್ನ ಹಗರಣಗಳು, ಮಂತ್ರಿಗಳ ಜಗಳ, ಅರಾಜಕತೆ, ಆರ್ಥಿಕ ಸಂಕಷ್ಟಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ. ಕಾಂಗ್ರೆಸ್ ಶಾಸಕರೆ ಸರ್ಕಾರದ ಕಾರ್ಯ ವೈಖರಿಗಳ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದ ಜನ ಅಭಿವೃದ್ಧಿ ಪರವಾದ ಸರ್ಕಾರ ಬಯಸುತ್ತಿದ್ದಾರೆ’ ಎಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಹೇಳಿದರು.</p>.<p>ತಾಲ್ಲೂಕಿನ ಹಳ್ಳೂರ ಗ್ರಾಮದ ಹಳ್ಳದರಂಗ ದೇವಸ್ಥಾನ ಹತ್ತಿರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ₹ 50 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣದ ಮುಂದುವರೆದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಈಗಾಗಲೇ ಹಳ್ಳೂರ ಗ್ರಾಮಕ್ಕೆ ರಾಜ್ಯಸಭಾ ಸಂಸದರ ನಿಧಿಯಿಂದ ಹಳ್ಳದರಂಗ ಸಮುದಾಯ ಭವನಕ್ಕೆ ₹50 ಲಕ್ಷ , ಚಂದ್ರವ್ವದೇವಿ ಸಮುದಾಯ ಭವನ, ಮಲ್ಲಿಕಾರ್ಜುನ ಸಮುದಾಯ ಭವನ, ಗಾಂಧಿ ನಗರದ ಬಸವೇಶ್ವರ ಸಮುದಾಯ ಭವನ, ಆದಿನಾಥ ಸಮುದಾಯ ಭವನಕ್ಕೆ, ಬಸ್ ಪ್ರಯಾಣಿಕರ ತಂಗುದಾಣಕ್ಕೆ ತಲಾ ₹5 ಲಕ್ಷ ವಿತರಿಸಲಾಗಿದೆ. ಯುವಕರ ಅನುಕೂಲಕ್ಕಾಗಿ ಗ್ರಾಮದಲ್ಲಿ ಓಪನ್ ಜಿಮ್ ಸೌಲಭ್ಯ ಒದಗಿಸಲುಪ್ರಯತ್ನಿಸುವೆ ಎಂದರು.</p>.<p>ಇದೇ ಸಂದರ್ಭದಲ್ಲಿ ಗ್ರಾಮದ ಚನ್ನಮ್ಮ ವೃತ್ತದ ಹತ್ತಿರ ಬಸ್ ಪ್ರಯಾಣಿಕರ ತಂಗುದಾಣಕ್ಕೆ ಪೂಜೆ ನೇರವೇರಿಸಿದರು.ನಂತರ ಚಂದ್ರವ್ವದೇವಿ ದೇವಸ್ಥಾನದ ಹತ್ತಿರ ನಿರ್ಮಾಣಗೊಂಡ ಸಮುದಾಯ ಭವನ ಕಟ್ಟಡ ಉದ್ಘಾಟಿಸಿದರು.</p>.<p>ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲವ್ವ ಹೊಸಟ್ಟಿ, ಸದಸ್ಯರಾದ ಸದಾಶಿವ ಮಾವರಕರ, ಪ್ರಮುಖರಾದ ಬಸವಣೆಪ್ಪ ಡಬ್ಬನ್ನವರ, ಶಂಕರ ಲೋಕನ್ನವರ, ಕುಮಾರ ಲೋಕನ್ನವರ, ಶಿವಪ್ಪ ಕೌಜಲಗಿ, ಶ್ರೀಕಾಂತ ಕೌಜಲಗಿ, ಸುರೇಶ ಮಗದುಮ್ಮ, ತುಕಾರಾಮ ಸನದಿ, ಮುತ್ತೆಪ್ಪ ಬೋಳನ್ನವರ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>