ಸಮಿತಿಯ ಬಸವರಾಜ ರಾಯರೆಡ್ಡಿ, ವಿ.ಆರ್. ಸುದರ್ಶನ್, ವೀರಕುಮಾರ ಪಾಟೀಲ, ನಸೀರ್ ಅಹಮದ್, ವೀರಣ್ಣ ಮತ್ತಿಕಟ್ಟಿ, ಆರ್. ಧ್ರುವನಾರಾಯಣ ಭಾಗವಹಿಸಲಿದ್ದಾರೆ. ಶಾಸಕರು, ವಿಧಾನಪರಿಷತ್ ಸದಸ್ಯರು, ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಪುರಸಭೆ ಸದಸ್ಯರು ಭಾಗವಹಿಸಬೇಕು ಎಂದು ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ.