<p><strong>ಬೆಳಗಾವಿ: </strong>‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ರಾಜ್ಯಸಭಾ ಸದಸ್ಯ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಆಧ್ಯಕ್ಷ ಈರಣ್ಣ ಕಡಾಡಿ ಆರೋಪಿಸಿದರು.</p>.<p>ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p>.<p>‘ಹಣಕಾಸಿನ ವ್ಯವಹಾರ, ಲೆಕ್ಕಪತ್ರದಲ್ಲಿ ಸರಿಯಾದ ಮಾಹಿತಿ ಒದಗಿಸದ ಕಾರಣ ಡಿ.ಕೆ. ಶಿವಕುಮಾರ್ ಮನೆ ಮೇಲೆ ಈ ಹಿಂದೆಯೂ ಇಡಿ ಮತ್ತು ಐಟಿ ದಾಳಿಯಾಗಿತ್ತು. ಆಗ ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಸಮರ್ಪಕ ದಾಖಲೆಗಳಿಲ್ಲದಿರುವುದು ಬಹಿರಂಗವಾಗಿತ್ತು. ಅದರ ಮುಂದುವರಿದ ಭಾಗವಾಗಿ ಈಗ ಮತ್ತೆ ದಾಳಿ ನಡೆದಿದೆ’ ಎಂದರು.</p>.<p>‘ಹಿಂದಿನ ತನಿಖೆ ಇನ್ನೂ ಪೂರ್ಣವಾಗಿಲ್ಲ. ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುತ್ತವೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಕಾಂಗ್ರೆಸ್ ನಾಯಕರು ಎಲ್ಲದರಲ್ಲೂ ರಾಜಕೀಯ ಮಾಡಬಾರದು’ ಎಂದು ಹೇಳಿದರು.</p>.<p>‘ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ಕೋವಿಡ್–19 ನಿಯಮಾವಳಿ ಅನುಸರಿಸಿ, ಗೌರವಯುತವಾಗಿ ನೆರವೇರಿಸಲಾಗಿದೆ. ಹೀಗಿರುವಾಗ ಅಂಗಡಿ ಅವರ ಕುಟುಂಬದವರಿಗೆ ನಮ್ಮ ಸರ್ಕಾರ ನ್ಯಾಯ ಒದಗಿಸಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೊದಲಾದವರು ಗುಲ್ಲೆಬ್ಬಿಸುವುದರಲ್ಲಿ ಅರ್ಥವಿಲ್ಲ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿಯನ್ನು ಕಾಂಗ್ರೆಸ್ ನಾಯಕರು ವಿನಾಕಾರಣ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ರಾಜ್ಯಸಭಾ ಸದಸ್ಯ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಆಧ್ಯಕ್ಷ ಈರಣ್ಣ ಕಡಾಡಿ ಆರೋಪಿಸಿದರು.</p>.<p>ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p>.<p>‘ಹಣಕಾಸಿನ ವ್ಯವಹಾರ, ಲೆಕ್ಕಪತ್ರದಲ್ಲಿ ಸರಿಯಾದ ಮಾಹಿತಿ ಒದಗಿಸದ ಕಾರಣ ಡಿ.ಕೆ. ಶಿವಕುಮಾರ್ ಮನೆ ಮೇಲೆ ಈ ಹಿಂದೆಯೂ ಇಡಿ ಮತ್ತು ಐಟಿ ದಾಳಿಯಾಗಿತ್ತು. ಆಗ ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಸಮರ್ಪಕ ದಾಖಲೆಗಳಿಲ್ಲದಿರುವುದು ಬಹಿರಂಗವಾಗಿತ್ತು. ಅದರ ಮುಂದುವರಿದ ಭಾಗವಾಗಿ ಈಗ ಮತ್ತೆ ದಾಳಿ ನಡೆದಿದೆ’ ಎಂದರು.</p>.<p>‘ಹಿಂದಿನ ತನಿಖೆ ಇನ್ನೂ ಪೂರ್ಣವಾಗಿಲ್ಲ. ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುತ್ತವೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ. ಕಾಂಗ್ರೆಸ್ ನಾಯಕರು ಎಲ್ಲದರಲ್ಲೂ ರಾಜಕೀಯ ಮಾಡಬಾರದು’ ಎಂದು ಹೇಳಿದರು.</p>.<p>‘ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ಕೋವಿಡ್–19 ನಿಯಮಾವಳಿ ಅನುಸರಿಸಿ, ಗೌರವಯುತವಾಗಿ ನೆರವೇರಿಸಲಾಗಿದೆ. ಹೀಗಿರುವಾಗ ಅಂಗಡಿ ಅವರ ಕುಟುಂಬದವರಿಗೆ ನಮ್ಮ ಸರ್ಕಾರ ನ್ಯಾಯ ಒದಗಿಸಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೊದಲಾದವರು ಗುಲ್ಲೆಬ್ಬಿಸುವುದರಲ್ಲಿ ಅರ್ಥವಿಲ್ಲ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>