ಯಮಕನಮರಡಿ: ‘ಸರ್ವರ ಅಭಿವೃದ್ಧಿಗಾಗಿ ಶ್ರಮಿಸುವ ಏಕೈಕ ಪಕ್ಷ ಕಾಂಗ್ರೆಸ್. ಆದ್ದರಿಂದ ತಾವೆಲ್ಲರೂ ಒಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಗೆಲ್ಲಿಸಬೇಕು’ ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಅವರು ಸಮೀಪದ ಉಳ್ಳಾಗಡ್ಡಿ ಖಾನಾಪುರ, ಕುರಣಿ, ಹಂಚಿನಾಳ, ಕೋಚರಿ, ಗೋಟೂರ ಗ್ರಾಮದಲ್ಲಿ ಬುಧವಾರ ನಡೆದ ಲೋಕಸಭೆ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
‘ಯುವ ಸಮುದಾಯಕ್ಕೆ ಹಾಗೂ ಮಹಿಳೆಯರಿಗೆ ಪ್ರಾತಿನಿಧ್ಯ ಕೊಡುವ ಉದ್ದೇಶದಿಂದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನನ್ನನ್ನು ವರಿಷ್ಠರು ಆಯ್ಕೆ ಮಾಡಿದ್ದಾರೆ’ ಎಂದರು.