<p><strong>ಕಾಗವಾಡ (ಬೆಳಗಾವಿ ಜಿಲ್ಲೆ):</strong> ಕಾಗವಾಡ ತಾಲ್ಲೂಕಿನ ಖಿಳೇಗಾಂವ ಗ್ರಾಮದ ಕಾಂಗ್ರೆಸ್ ಮುಖಂಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಣ್ಣಪ್ಪ ಬಸಪ್ಪ ನಿಂಬಾಳ (58) ಅವರನ್ನು ಬುಧವಾರ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.</p><p>ಅಣ್ಣಪ್ಪ ಅವರು ಬುಧವಾರ ಸಂಜೆ ದೇವಸ್ಥಾನಕ್ಕೆ ಹೋಗಿ ಮರಳುತ್ತಿದ್ದ ವೇಳೆ ಆರು ಮಂದಿ ಮುಸುಕುಧಾರಿಗಳ ಗುಂಪು ಅವರ ಮೇಲೆ ದಾಳಿ ಮಾಡಿದೆ. ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದೆ.</p><p>ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಣ್ಣಪ್ಪ ಅವರನ್ನು ಅಥಣಿ ಆಸ್ಪತ್ರೆಗೆ ಸಾಗಿಸಲಾಯಿತು. ಮಾರ್ಗ ಮಧ್ಯದಲ್ಲೇ ಅವರು ಉಸಿರು ಬಿಟ್ಟರು ಎಂದು ಮೂಲಗಳು ತಿಳಿಸಿವೆ.</p><p>ಅಣ್ಣಪ್ಪ ಅವರು ಶಾಸಕರಾದ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಅವರ ಆಪ್ತರಾಗಿದ್ದರು. ಕೊಲೆ ವಿಷಯ ತಿಳಿದು ಶಾಸಕ ಸವದಿ ಆಸ್ಪತ್ರೆಗೆ ಭೇಟಿ ನೀಡಿದರು.</p><p>ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಥಣಿ ಪೊಲೀಸರು ತಿಳಿಸಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣ ಮನೆ ಮಾಡಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಗವಾಡ (ಬೆಳಗಾವಿ ಜಿಲ್ಲೆ):</strong> ಕಾಗವಾಡ ತಾಲ್ಲೂಕಿನ ಖಿಳೇಗಾಂವ ಗ್ರಾಮದ ಕಾಂಗ್ರೆಸ್ ಮುಖಂಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಣ್ಣಪ್ಪ ಬಸಪ್ಪ ನಿಂಬಾಳ (58) ಅವರನ್ನು ಬುಧವಾರ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.</p><p>ಅಣ್ಣಪ್ಪ ಅವರು ಬುಧವಾರ ಸಂಜೆ ದೇವಸ್ಥಾನಕ್ಕೆ ಹೋಗಿ ಮರಳುತ್ತಿದ್ದ ವೇಳೆ ಆರು ಮಂದಿ ಮುಸುಕುಧಾರಿಗಳ ಗುಂಪು ಅವರ ಮೇಲೆ ದಾಳಿ ಮಾಡಿದೆ. ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದೆ.</p><p>ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಣ್ಣಪ್ಪ ಅವರನ್ನು ಅಥಣಿ ಆಸ್ಪತ್ರೆಗೆ ಸಾಗಿಸಲಾಯಿತು. ಮಾರ್ಗ ಮಧ್ಯದಲ್ಲೇ ಅವರು ಉಸಿರು ಬಿಟ್ಟರು ಎಂದು ಮೂಲಗಳು ತಿಳಿಸಿವೆ.</p><p>ಅಣ್ಣಪ್ಪ ಅವರು ಶಾಸಕರಾದ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಅವರ ಆಪ್ತರಾಗಿದ್ದರು. ಕೊಲೆ ವಿಷಯ ತಿಳಿದು ಶಾಸಕ ಸವದಿ ಆಸ್ಪತ್ರೆಗೆ ಭೇಟಿ ನೀಡಿದರು.</p><p>ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಅಥಣಿ ಪೊಲೀಸರು ತಿಳಿಸಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣ ಮನೆ ಮಾಡಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>