‘ಶಾಸಕರು, ನಗರಪಾಲಿಕೆ ಸದಸ್ಯರು ನಮ್ಮ ಕಷ್ಟಗಳಿಗೆ ಸ್ಪಂದಿಸುವುದಿಲ್ಲ. ಇಲ್ಲಿವರೆಗೂ ಪರಿಹಾರ ಕೊಡಿಸಿಲ್ಲ. ಕೋವಿಡ್ ಹಾಗೂ ಮಳೆಯಿಂದ ಸಾಕಷ್ಟು ಸಮಸ್ಯೆಗಳಾಗಿವೆ. ಸಾಲ ಮಾಡಿ ನೇಕಾರಿಕೆಯಲ್ಲಿ ತೊಡಗಿದ್ದವರು ನಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಮೂರು ತಿಂಗಳವರೆಗೆ ಆಹಾರವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾದರೂ ಯಾರೊಬ್ಬರೂ ಸಹಕಾರ ನೀಡಲಿಲ್ಲ’ ಎಂದು ದೂರಿ ಅಳಲು ತೋಡಿಕೊಂಡರು.