<p><strong>ಬೆಳಗಾವಿ:</strong> ‘ದೇಶದ ಕೆಲವರು ರೈತರ ಹೆಸರಿನಲ್ಲಿ, ಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಅಸಲಿ ರೈತರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇದ್ದಾರೆ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.</p>.<p>ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ನವರು ಮೂರ್ಖರಿದ್ದಾರೆ. ಯಾವುದೇ ಅಂಕಿ– ಅಂಶಗಳಿಲ್ಲದೆ ಸುಳ್ಳು ಹೇಳುತ್ತಿದ್ದಾರೆ’ ಎಂದು ಕಿಡಿಕಾರಿದರು.</p>.<p>‘ಏ. 17ರಂದು ನಡೆಯುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಹಿಂದಿಗಿಂತಲೂ ಹೆಚ್ಚಿನ ಅಂತರದಿಂದ ಗೆಲ್ಲಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ’ ಎಂಬ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಹೌದು ಬದಲಾವಣೆ ಆಗುತ್ತದೆ. ಬಿಜೆಪಿ ಮತ್ತಷ್ಟು ಬಲಿಷ್ಠವಾಗುವುದೇ ಆ ಬದಲಾವಣೆ. ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಮತ್ತಷ್ಟು ಶಕ್ತಿ ಗಳಿಸಲಿದೆ. ಸರ್ಕಾರ ಮತ್ತಷ್ಟು ಗಟ್ಟಿಯಾಗಿ ಉತ್ಸಾಹದಿಂದ ಕಾರ್ಯಕರ್ತರು ಕೆಲಸ ಮಾಡುತ್ತಾರೆ’ ಎಂದು ಹೇಳಿದರು.</p>.<p>‘ಬಿ.ಎಸ್. ಯಡಿಯೂರಪ್ಪ ಅವರು ಉತ್ತಮ ಯೋಜನೆಗಳ ಮೂಲಕ ಒಳ್ಳೆಯ ರೀತಿಯಲ್ಲಿ ಸರ್ಕಾರ ನಡೆಸುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಕಾಂಗ್ರೆಸ್ ನಾಯಕತ್ವ ವಿಫಲವಾಗಿದೆ. ರಾಹುಲ್ ಗಾಂಧಿ ಮೇಲೆ ಆ ಪಕ್ಷದ ನಾಯಕರಿಗೂ ಭರವಸೆ ಇಲ್ಲ. ವಿನಾಶದತ್ತ ಸಾಗುತ್ತಿದೆ’ ಎಂದು ಟೀಕಿಸಿದರು.</p>.<p>‘ದೇಶದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ. ಆಡಳಿತ ಪರವಾದ ಅಲೆ ಇದೆ’ ಎಂದು ಸಮರ್ಥಿಸಿಕೊಂಡರು.</p>.<p>ಸಚಿವ ಕೆ.ಎಸ್. ಈಶ್ವರಪ್ಪ ಅಸಮಾಧಾನ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ದೊಡ್ಡ ಪರಿವಾರ. ಸಣ್ಣ ಪುಟ್ಟ ಸಮಸ್ಯೆ ಬಂದಾಗ ಮಾತುಕತೆ ನಡೆಸಿ ಪರಿಹರಿಸುತ್ತೇವೆ. ಯಡಿಯೂರಪ್ಪ-ಈಶ್ವರಪ್ಪ ಒಂದೇ ತಟ್ಟೆಯಲ್ಲಿ ಊಟ ಮಾಡುತ್ತಾರೆ. ನಾವಿಬ್ಬರೂ ಒಂದೇ ಎಂದು ಸ್ವತಃ ಈಶ್ವರಪ್ಪ ಅವರೇ ಹೇಳಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ದೇಶದ ಕೆಲವರು ರೈತರ ಹೆಸರಿನಲ್ಲಿ, ಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಅಸಲಿ ರೈತರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇದ್ದಾರೆ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.</p>.<p>ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ನವರು ಮೂರ್ಖರಿದ್ದಾರೆ. ಯಾವುದೇ ಅಂಕಿ– ಅಂಶಗಳಿಲ್ಲದೆ ಸುಳ್ಳು ಹೇಳುತ್ತಿದ್ದಾರೆ’ ಎಂದು ಕಿಡಿಕಾರಿದರು.</p>.<p>‘ಏ. 17ರಂದು ನಡೆಯುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಹಿಂದಿಗಿಂತಲೂ ಹೆಚ್ಚಿನ ಅಂತರದಿಂದ ಗೆಲ್ಲಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ’ ಎಂಬ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಹೌದು ಬದಲಾವಣೆ ಆಗುತ್ತದೆ. ಬಿಜೆಪಿ ಮತ್ತಷ್ಟು ಬಲಿಷ್ಠವಾಗುವುದೇ ಆ ಬದಲಾವಣೆ. ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಮತ್ತಷ್ಟು ಶಕ್ತಿ ಗಳಿಸಲಿದೆ. ಸರ್ಕಾರ ಮತ್ತಷ್ಟು ಗಟ್ಟಿಯಾಗಿ ಉತ್ಸಾಹದಿಂದ ಕಾರ್ಯಕರ್ತರು ಕೆಲಸ ಮಾಡುತ್ತಾರೆ’ ಎಂದು ಹೇಳಿದರು.</p>.<p>‘ಬಿ.ಎಸ್. ಯಡಿಯೂರಪ್ಪ ಅವರು ಉತ್ತಮ ಯೋಜನೆಗಳ ಮೂಲಕ ಒಳ್ಳೆಯ ರೀತಿಯಲ್ಲಿ ಸರ್ಕಾರ ನಡೆಸುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಕಾಂಗ್ರೆಸ್ ನಾಯಕತ್ವ ವಿಫಲವಾಗಿದೆ. ರಾಹುಲ್ ಗಾಂಧಿ ಮೇಲೆ ಆ ಪಕ್ಷದ ನಾಯಕರಿಗೂ ಭರವಸೆ ಇಲ್ಲ. ವಿನಾಶದತ್ತ ಸಾಗುತ್ತಿದೆ’ ಎಂದು ಟೀಕಿಸಿದರು.</p>.<p>‘ದೇಶದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲ. ಆಡಳಿತ ಪರವಾದ ಅಲೆ ಇದೆ’ ಎಂದು ಸಮರ್ಥಿಸಿಕೊಂಡರು.</p>.<p>ಸಚಿವ ಕೆ.ಎಸ್. ಈಶ್ವರಪ್ಪ ಅಸಮಾಧಾನ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ದೊಡ್ಡ ಪರಿವಾರ. ಸಣ್ಣ ಪುಟ್ಟ ಸಮಸ್ಯೆ ಬಂದಾಗ ಮಾತುಕತೆ ನಡೆಸಿ ಪರಿಹರಿಸುತ್ತೇವೆ. ಯಡಿಯೂರಪ್ಪ-ಈಶ್ವರಪ್ಪ ಒಂದೇ ತಟ್ಟೆಯಲ್ಲಿ ಊಟ ಮಾಡುತ್ತಾರೆ. ನಾವಿಬ್ಬರೂ ಒಂದೇ ಎಂದು ಸ್ವತಃ ಈಶ್ವರಪ್ಪ ಅವರೇ ಹೇಳಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>