ಖಾನಾಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೋಮವಾರಈ ವಿಷಯ ತಿಳಿಸಿದ ಅವರು, 'ಕ್ಷೇತ್ರದ ಕೆಲವು ಗಂಭೀರ ಸಮಸ್ಯೆಗಳ ಪರಿಹಾರದ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಪಾದಯಾತ್ರೆ ಮಾಡುತ್ತಿದ್ದೇನೆ. ಅಧಿವೇಶನ ಆರಂಭದ ದಿನವಾದ ಡಿ.13ರಂದು ಸುವರ್ಣ ವಿಧಾನಸೌಧ ತಲುಪುತ್ತೇನೆ. ಕ್ಷೇತ್ರದ ನಮ್ಮ ಕಾರ್ಯಕರ್ತರು, ನಾಗರಿಕರು, ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ಸಾವಿರಾರು ಜನ ಭಾಗವಹಿಸಲಿದ್ದಾರೆ' ಎಂದರು.