ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾನಾಪುರ ಕಡೆಗಣನೆ ಖಂಡಿಸಿ ಅಂಜಲಿ ಪಾದಯಾತ್ರೆ

Last Updated 6 ಡಿಸೆಂಬರ್ 2021, 10:01 IST
ಅಕ್ಷರ ಗಾತ್ರ

ಬೆಳಗಾವಿ: ಖಾನಾಪುರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ನೀಡುವಲ್ಲಿ ಸರ್ಕಾರವು ತಾರತಮ್ಯ ಮಾಡುತ್ತಿರುವುದನ್ನು ಖಂಡಿಸಿ ಡಿ.12ರಂದು ಖಾನಾಪುರದಿಂದ ಬೆಳಗಾವಿಯ ಸುವರ್ಣ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುತ್ತೇನೆ ಎಂದು ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ತಿಳಿಸಿದರು.

ಖಾನಾಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೋಮವಾರಈ ವಿಷಯ ತಿಳಿಸಿದ ಅವರು, 'ಕ್ಷೇತ್ರದ ಕೆಲವು ಗಂಭೀರ ಸಮಸ್ಯೆಗಳ ಪರಿಹಾರದ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಪಾದಯಾತ್ರೆ ಮಾಡುತ್ತಿದ್ದೇನೆ. ಅಧಿವೇಶನ ಆರಂಭದ ದಿನವಾದ ಡಿ.13ರಂದು ಸುವರ್ಣ ವಿಧಾನಸೌಧ ತಲುಪುತ್ತೇನೆ. ಕ್ಷೇತ್ರದ ನಮ್ಮ ಕಾರ್ಯಕರ್ತರು, ನಾಗರಿಕರು, ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ಸಾವಿರಾರು ಜನ ಭಾಗವಹಿಸಲಿದ್ದಾರೆ' ಎಂದರು.

'ಕ್ಷೇತ್ರದ ಅಭಿವೃದ್ಧಿಗೆ ಸಮರ್ಪಕವಾಗಿ ಅನುದಾನ ಒದಗಿಸಬೇಕು' ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT