<p><strong>ಬೆಳಗಾವಿ:</strong> ವಿಕಸಿತ ಭಾರತ– ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ–ಜಿ ರಾಮ್ ಜಿ) ಕಾಯ್ದೆ ವಿರೋಧಿಸಿ, ಇಲ್ಲಿನ ಕಾಂಗ್ರೆಸ್ ಭವನದ ಎದುರು ಭಾನುವಾರ ಬೆಳಿಗ್ಗೆಯಿಂದ ಸಾಂಕೇತಿಕ ಪ್ರತಿಭಟನೆ ಮತ್ತು ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭಗೊಂಡಿದೆ.</p><p>ಪ್ರತಿಭಟನೆ ನೇತೃತ್ವ ವಹಿಸಿದ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್, 'ಕಾಂಗ್ರೆಸ್ ಸಾಮರಸ್ಯ, ಶಾಂತಿಗಾಗಿ ಹೋರಾಡುತ್ತಿದ್ದರೆ, ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ನರೇಗಾ ಯೋಜನೆಯಿಂದ ಗಾಂಧಿ ಹೆಸರು ತೆಗೆದು, ಮತ್ತೊಮ್ಮೆ ಅವರ ಹತ್ಯೆ ಮಾಡಿದೆ. ಇದನ್ನು ವಿರೋಧಿಸಿ ಹೋರಾಟ ಮಾಡುತ್ತಿದ್ದೇವೆ' ಎಂದರು.</p><p>'ನರೇಗಾ ಬದಲಿಗೆ ಕೇಂದ್ರ ಜಾರಿಗೆ ತರುತ್ತಿರುವ ಹೊಸ ಕಾಯ್ದೆ ರದ್ದುಪಡಿಸುವವರೆಗೂ ಹೋರಾಟ ನಿಲ್ಲದು. ಈ ಹೋರಾಟವು ಇಡೀ ದೇಶದಲ್ಲಿ ಚಳವಳಿ ರೂಪ ಪಡೆಯಬೇಕಿದೆ' ಎಂದರು.</p><p>ಶಾಸಕರಾದ ಮಹಾಂತೇಶ ಕೌಜಲಗಿ, ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ, ಆಸಿಫ್ ಸೇಠ್, ಮುಖಂಡರಾದ ವಿನಯ ನಾವಲಗಟ್ಟಿ, ರಾಹುಲ ಜಾರಕಿಹೊಳಿ, ಮೃಣಾಲ್ ಹೆಬ್ಬಾಳಕರ ಮತ್ತಿತರರು ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ವಿಕಸಿತ ಭಾರತ– ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ–ಜಿ ರಾಮ್ ಜಿ) ಕಾಯ್ದೆ ವಿರೋಧಿಸಿ, ಇಲ್ಲಿನ ಕಾಂಗ್ರೆಸ್ ಭವನದ ಎದುರು ಭಾನುವಾರ ಬೆಳಿಗ್ಗೆಯಿಂದ ಸಾಂಕೇತಿಕ ಪ್ರತಿಭಟನೆ ಮತ್ತು ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭಗೊಂಡಿದೆ.</p><p>ಪ್ರತಿಭಟನೆ ನೇತೃತ್ವ ವಹಿಸಿದ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಗೋಪಿನಾಥ ಪಳನಿಯಪ್ಪನ್, 'ಕಾಂಗ್ರೆಸ್ ಸಾಮರಸ್ಯ, ಶಾಂತಿಗಾಗಿ ಹೋರಾಡುತ್ತಿದ್ದರೆ, ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ನರೇಗಾ ಯೋಜನೆಯಿಂದ ಗಾಂಧಿ ಹೆಸರು ತೆಗೆದು, ಮತ್ತೊಮ್ಮೆ ಅವರ ಹತ್ಯೆ ಮಾಡಿದೆ. ಇದನ್ನು ವಿರೋಧಿಸಿ ಹೋರಾಟ ಮಾಡುತ್ತಿದ್ದೇವೆ' ಎಂದರು.</p><p>'ನರೇಗಾ ಬದಲಿಗೆ ಕೇಂದ್ರ ಜಾರಿಗೆ ತರುತ್ತಿರುವ ಹೊಸ ಕಾಯ್ದೆ ರದ್ದುಪಡಿಸುವವರೆಗೂ ಹೋರಾಟ ನಿಲ್ಲದು. ಈ ಹೋರಾಟವು ಇಡೀ ದೇಶದಲ್ಲಿ ಚಳವಳಿ ರೂಪ ಪಡೆಯಬೇಕಿದೆ' ಎಂದರು.</p><p>ಶಾಸಕರಾದ ಮಹಾಂತೇಶ ಕೌಜಲಗಿ, ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ, ಆಸಿಫ್ ಸೇಠ್, ಮುಖಂಡರಾದ ವಿನಯ ನಾವಲಗಟ್ಟಿ, ರಾಹುಲ ಜಾರಕಿಹೊಳಿ, ಮೃಣಾಲ್ ಹೆಬ್ಬಾಳಕರ ಮತ್ತಿತರರು ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>