<p><strong>ಬೆಳಗಾವಿ:</strong> ಯುದ್ಧದ ನೆಪವೊಡ್ಡಿ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವುದನ್ನು ಖಂಡಿಸಿ, ಇಲ್ಲಿನ ಕಾಂಗ್ರೆಸ್ ಭವನದ ಎದುರು ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>‘ಅಡುಗೆ ಅನಿಲ ಸಿಲಿಂಡರ್ ದರ ಇಳಿಸಬೇಕು’ ಎಂದು ಘೋಷಣೆ ಕೂಗಿದ ಕಾರ್ಯಕರ್ತೆಯರು, ತಲೆ ಮೇಲೆ ಖಾಲಿ ಅಡುಗೆ ಅನಿಲ ಸಿಲಿಂಡರ್ ಹೊತ್ತು ಗಮನಸೆಳೆದರು.</p>.<p>‘ದೇಶದಲ್ಲಿ ಜನರು ಮೊದಲೇ ಸಂಕಷ್ಟದಲ್ಲಿ ಇದ್ದಾರೆ. ಹೀಗಿರುವಾಗ ಸಿಲಿಂಡರ್ ದರ ಹೆಚ್ಚಿಸಿರುವ ನಿರ್ಧಾರ ಜನರಿಗೆ ಮತ್ತೊಂದು ಹೊಡೆತ ಕೊಟ್ಟಿದೆ’ ಎಂದು ದೂರಿದರು.</p>.<p>ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ., ಜಯಶ್ರೀ ಮಾಳಗಿ ಇತರರಿದ್ದರು.</p>.<p><strong>‘ಒಳಚರಂಡಿ ಪೈಪ್ಲೈನ್ ದುರಸ್ತಿ ಮಾಡಿ’ </strong></p><p><strong>ಬೆಳಗಾವಿ:</strong> ‘ಹಾನಿಗೆ ಒಳಗಾದ ಭೂಗತ ಒಳಚರಂಡಿ ಪೈಪ್ಲೈನ್ಗಳನ್ನು ದುರಸ್ತಿ ಮಾಡಬೇಕು’ ಎಂದು ಒತ್ತಾಯಿಸಿ ಇಲ್ಲಿನ ವಡಗಾವಿಯ ರೈತ ಗಲ್ಲಿ ನಿವಾಸಿಗಳು ಮಂಗಳವಾರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಖಾಲಿ ಕೊಡಗಳನ್ನು ಪ್ರದರ್ಶಿಸಿ ಪಾಲಿಕೆ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.</p><p> ‘ನಮಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸೇರುತ್ತಿದೆ. ಇದರಿಂದಾಗಿ ಆ ನೀರು ಸೇವಿಸಲಾಗುತ್ತಿಲ್ಲ. ಹಾಗಾಗಿ ಹಾಳಾಗಿರುವ ಒಳಚರಂಡಿ ಪೈಪ್ಲೈನ್ ಸರಿಪಡಿಸಿ ನಮಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು’ ಎಂದು ಆಗ್ರಹಿಸಿದರು. ಮುಖಂಡ ರಾಜು ಮರ್ವೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಯುದ್ಧದ ನೆಪವೊಡ್ಡಿ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವುದನ್ನು ಖಂಡಿಸಿ, ಇಲ್ಲಿನ ಕಾಂಗ್ರೆಸ್ ಭವನದ ಎದುರು ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>‘ಅಡುಗೆ ಅನಿಲ ಸಿಲಿಂಡರ್ ದರ ಇಳಿಸಬೇಕು’ ಎಂದು ಘೋಷಣೆ ಕೂಗಿದ ಕಾರ್ಯಕರ್ತೆಯರು, ತಲೆ ಮೇಲೆ ಖಾಲಿ ಅಡುಗೆ ಅನಿಲ ಸಿಲಿಂಡರ್ ಹೊತ್ತು ಗಮನಸೆಳೆದರು.</p>.<p>‘ದೇಶದಲ್ಲಿ ಜನರು ಮೊದಲೇ ಸಂಕಷ್ಟದಲ್ಲಿ ಇದ್ದಾರೆ. ಹೀಗಿರುವಾಗ ಸಿಲಿಂಡರ್ ದರ ಹೆಚ್ಚಿಸಿರುವ ನಿರ್ಧಾರ ಜನರಿಗೆ ಮತ್ತೊಂದು ಹೊಡೆತ ಕೊಟ್ಟಿದೆ’ ಎಂದು ದೂರಿದರು.</p>.<p>ಪಕ್ಷದ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ., ಜಯಶ್ರೀ ಮಾಳಗಿ ಇತರರಿದ್ದರು.</p>.<p><strong>‘ಒಳಚರಂಡಿ ಪೈಪ್ಲೈನ್ ದುರಸ್ತಿ ಮಾಡಿ’ </strong></p><p><strong>ಬೆಳಗಾವಿ:</strong> ‘ಹಾನಿಗೆ ಒಳಗಾದ ಭೂಗತ ಒಳಚರಂಡಿ ಪೈಪ್ಲೈನ್ಗಳನ್ನು ದುರಸ್ತಿ ಮಾಡಬೇಕು’ ಎಂದು ಒತ್ತಾಯಿಸಿ ಇಲ್ಲಿನ ವಡಗಾವಿಯ ರೈತ ಗಲ್ಲಿ ನಿವಾಸಿಗಳು ಮಂಗಳವಾರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಖಾಲಿ ಕೊಡಗಳನ್ನು ಪ್ರದರ್ಶಿಸಿ ಪಾಲಿಕೆ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.</p><p> ‘ನಮಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸೇರುತ್ತಿದೆ. ಇದರಿಂದಾಗಿ ಆ ನೀರು ಸೇವಿಸಲಾಗುತ್ತಿಲ್ಲ. ಹಾಗಾಗಿ ಹಾಳಾಗಿರುವ ಒಳಚರಂಡಿ ಪೈಪ್ಲೈನ್ ಸರಿಪಡಿಸಿ ನಮಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು’ ಎಂದು ಆಗ್ರಹಿಸಿದರು. ಮುಖಂಡ ರಾಜು ಮರ್ವೆ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>