ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಣ್ಣ ರಾಜ್ಯಗಳು ಆರ್ಥಿಕ ಅಭಿವೃದ್ಧಿಗೆ ಪೂರಕ: ಸತೀಶ ಜಾರಕಿಹೊಳಿ ಅಭಿಮತ

Last Updated 23 ಜೂನ್ 2022, 12:21 IST
ಅಕ್ಷರ ಗಾತ್ರ

ಬೆಳಗಾವಿ: ‘ಸಣ್ಣ ರಾಜ್ಯಗಳು ಆರ್ಥಿಕ ಅಭಿವೃದ್ಧಿಗೆ ಪೂರಕವಾಗಲಿವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆ ಬಗ್ಗೆ ಸಚಿವ ಉಮೇಶ ಕತ್ತಿ ನೀಡಿದ ಹೇಳಿಕೆಗೆ, ಇಲ್ಲಿ ಸುದ್ದಿಗಾರರಿಗೆ ‍ಮೇಲಿನಂತೆ ಪ್ರತಿಕ್ರಿಯಿಸಿದ ಅವರು, ‘ಯಾವುದೇ ರಾಜ್ಯ 3 ಕೋಟಿಗಿಂತ ಅಧಿಕ ಜನಸಂಖ್ಯೆ ಹೊಂದಿದ್ದರೆ ಮತ್ತೊಂದು ರಾಜ್ಯ ರಚಿಸಲು ವಿಶೇಷ ಮಸೂದೆ ಹೊರತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅದು ಜಾರಿಯಾದರೆ ಎರಡು ರಾಜ್ಯಗಳಾಗುವುದು ಸಹಜ’ ಎಂದರು.

‘ಹೋರಾಟ ಮಾಡಿ ಅಲ್ಲಿನವರು ತೆಲಂಗಾಣ ರಾಜ್ಯ ರಚಿಸಿಕೊಂಡರು. ಆದರೆ, ಇದು ಹೋರಾಟವಲ್ಲ. ಪ್ರತ್ಯೇಕ ರಾಜ್ಯ ರಚನೆಗೆ ಬಿಜೆಪಿಯವರೇ ಮಸೂದೆ ಜಾರಿಗೊಳಿಸುತ್ತಿದ್ದಾರೆ. ಹಾಗಾಗಿ ಇಲ್ಲಿ ಪ್ರತ್ಯೇಕ ರಾಜ್ಯದ ಪ್ರಶ್ನೆಯೇ ಬರುವುದಿಲ್ಲ. ಆ ಮಸೂದೆ ಜಾರಿಗೆ ಬರುವಾಗ ಚರ್ಚಿಸೋಣ’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT