ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಈ ವಿಷಯದಲ್ಲಿ ಕಾಂಗ್ರೆಸ್ನವರು ಮಾನವೀಯತೆಯಿಂದ ನಡೆದುಕೊಳ್ಳಬೇಕು. ವಿಚಾರಣೆ ಮತ್ತು ತನಿಖೆ ಪ್ರಕ್ರಿಯೆಗಳು ವರ್ಷಗಟ್ಟಲೆ ನಡೆಯುವುದನ್ನು ನೋಡಿದ್ದೇವೆ. 15 ದಿನಗಳಲ್ಲಿ ಎಲ್ಲವೂ ಮುಗಿದು ಹೋಗಬೇಕು ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬಯಸಿದ್ದಾರೆಯೇ? ಅವರು, ಉಪ ಚುನಾವಣೆ ಎದುರಿಸಿ ಗೆದ್ದು ತೋರಿಸಲಿ. ಅದನ್ನು ಬಿಟ್ಟು ವೈಯಕ್ತಿಕ ಸಂಬಂಧಗಳ ಬಗ್ಗೆ ಕೆದಕಿ ಚಾರಿತ್ರ್ಯವಧೆ ಮಾಡುವುದು ಸರಿಯಲ್ಲ’ ಎಂದು ವಾಗ್ದಾಳಿ ನಡೆಸಿದರು.