<p><strong>ಬೆಳಗಾವಿ:</strong> ‘ಜೆಡಿಎಸ್ ಜೊತೆಗೆ ಮರು ಮೈತ್ರಿ ಮಾಡಿಕೊಳ್ಳುವ ವಿಚಾರವೂ ಸೇರಿಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಎಲ್ಲಾ ಪ್ರಯತ್ನವನ್ನೂ ಕಾಂಗ್ರೆಸ್ ಮಾಡುತ್ತದೆ,’ ಎಂದು ಕೆಪಿಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದರು.</p>.<p>ಗೋಕಾಕ್ನಲ್ಲಿ ಲಖನ್ ಜಾರಕಿಹೊಳಿ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ವೇಳೆ ಮಾತನಾಡಿದ ಅವರು, ‘ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಕುದುರೆ ವ್ಯಾಪಾರದ ಮೂಲಕ ಖರೀದಿಸಿ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಪಡೆದಿದೆ. ಈ ರಾಜ್ಯದ ಮುಖ್ಯಮಂತ್ರಿಯಾಗುವುದಕ್ಕೆ ಯಡಿಯೂರಪ್ಪಗೆ ಜನಾದೇಶವಿಲ್ಲ’ ಎಂದ ಟೀಕಿಸಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/chikkaballapur/siddaramaiah-criticize-yediyurappa-in-chikkaballapura-686903.html">ಯಡಿಯೂರಪ್ಪ ಯಾವತ್ತಾದ್ರು ಮುಂಬಾಗಿಲಿನ ಮುಖ್ಯಮಂತ್ರಿ ಆಗಿದ್ರಾ?: ಸಿದ್ದರಾಮಯ್ಯ</a></p>.<p>‘ಪ್ರಜಾಪ್ರಭುತ್ವದ ಮೌಲ್ಯ ಮತ್ತು ಆಶಯವನ್ನು ಕಾಪಾಡುವುದಕ್ಕಾಗಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವುದಕ್ಕೆ ಕಾಂಗ್ರೆಸ್ ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ,’ ಎಂದು ಸ್ಪಷ್ಟಪಡಿಸಿದರು.</p>.<p>ಜೆಡಿಎಸ್ ಜೊತೆ ಮರು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ಮಾತನ್ನು ಅಲ್ಲಗಳೆದ ವೇಣುಗೋಪಾಲ್,‘ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸೇರಿ ನಮ್ಮೆಲ್ಲರ ಧನಿ ಒಂದೇ ಆಗಿದೆ. ಡಿಸೆಂಬರ್ 9 ಅನ್ನು ಪ್ರಜಾಪ್ರಭುತ್ವಕ್ಕೆ ಉತ್ತಮ ದಿನವನ್ನಾಗಿಸುವುದು ನಮ್ಮ ಗುರಿ,’ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/jds-will-not-support-bjp-or-congress-686896.html">ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ: ದೇವೇಗೌಡ</a></p>.<p>‘ಗುಜರಾತ್ ಮತ್ತು ಮಹಾರಾಷ್ಟ್ರದ ಜನ ಪಕ್ಷಕ್ಕೆ ಮೋಸ ಮಾಡಿದ ಶಾಸಕರಿಗೆ ಉತ್ತಮ ಪಾಠ ಕಲಿಸಿದ್ದಾರೆ. ಈಗ ಆ ಅವಕಾಶ ರಾಜ್ಯದ ಜನರ ಮುಂದಿದೆ. ಪಕ್ಷಾಂತರಿಗಳನ್ನು ಸೋಲಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾಗಿದೆ. ಜನತೆಗೆ ಮೋಸ ಮಾಡಿದ ಶಾಸಕರನ್ನು ಗೆಲ್ಲಿಸಿದರೆ, ದೇಶಕ್ಕೆ ಕೆಟ್ಟ ಸಂದೇಶ ನೀಡಿದಂತಾಗುತ್ತದೆ,’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಜೆಡಿಎಸ್ ಜೊತೆಗೆ ಮರು ಮೈತ್ರಿ ಮಾಡಿಕೊಳ್ಳುವ ವಿಚಾರವೂ ಸೇರಿಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಎಲ್ಲಾ ಪ್ರಯತ್ನವನ್ನೂ ಕಾಂಗ್ರೆಸ್ ಮಾಡುತ್ತದೆ,’ ಎಂದು ಕೆಪಿಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದರು.</p>.<p>ಗೋಕಾಕ್ನಲ್ಲಿ ಲಖನ್ ಜಾರಕಿಹೊಳಿ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ವೇಳೆ ಮಾತನಾಡಿದ ಅವರು, ‘ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಕುದುರೆ ವ್ಯಾಪಾರದ ಮೂಲಕ ಖರೀದಿಸಿ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಪಡೆದಿದೆ. ಈ ರಾಜ್ಯದ ಮುಖ್ಯಮಂತ್ರಿಯಾಗುವುದಕ್ಕೆ ಯಡಿಯೂರಪ್ಪಗೆ ಜನಾದೇಶವಿಲ್ಲ’ ಎಂದ ಟೀಕಿಸಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/district/chikkaballapur/siddaramaiah-criticize-yediyurappa-in-chikkaballapura-686903.html">ಯಡಿಯೂರಪ್ಪ ಯಾವತ್ತಾದ್ರು ಮುಂಬಾಗಿಲಿನ ಮುಖ್ಯಮಂತ್ರಿ ಆಗಿದ್ರಾ?: ಸಿದ್ದರಾಮಯ್ಯ</a></p>.<p>‘ಪ್ರಜಾಪ್ರಭುತ್ವದ ಮೌಲ್ಯ ಮತ್ತು ಆಶಯವನ್ನು ಕಾಪಾಡುವುದಕ್ಕಾಗಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವುದಕ್ಕೆ ಕಾಂಗ್ರೆಸ್ ಎಲ್ಲಾ ಪ್ರಯತ್ನಗಳನ್ನು ಮಾಡುತ್ತದೆ,’ ಎಂದು ಸ್ಪಷ್ಟಪಡಿಸಿದರು.</p>.<p>ಜೆಡಿಎಸ್ ಜೊತೆ ಮರು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ಮಾತನ್ನು ಅಲ್ಲಗಳೆದ ವೇಣುಗೋಪಾಲ್,‘ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸೇರಿ ನಮ್ಮೆಲ್ಲರ ಧನಿ ಒಂದೇ ಆಗಿದೆ. ಡಿಸೆಂಬರ್ 9 ಅನ್ನು ಪ್ರಜಾಪ್ರಭುತ್ವಕ್ಕೆ ಉತ್ತಮ ದಿನವನ್ನಾಗಿಸುವುದು ನಮ್ಮ ಗುರಿ,’ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/jds-will-not-support-bjp-or-congress-686896.html">ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ: ದೇವೇಗೌಡ</a></p>.<p>‘ಗುಜರಾತ್ ಮತ್ತು ಮಹಾರಾಷ್ಟ್ರದ ಜನ ಪಕ್ಷಕ್ಕೆ ಮೋಸ ಮಾಡಿದ ಶಾಸಕರಿಗೆ ಉತ್ತಮ ಪಾಠ ಕಲಿಸಿದ್ದಾರೆ. ಈಗ ಆ ಅವಕಾಶ ರಾಜ್ಯದ ಜನರ ಮುಂದಿದೆ. ಪಕ್ಷಾಂತರಿಗಳನ್ನು ಸೋಲಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕಾಗಿದೆ. ಜನತೆಗೆ ಮೋಸ ಮಾಡಿದ ಶಾಸಕರನ್ನು ಗೆಲ್ಲಿಸಿದರೆ, ದೇಶಕ್ಕೆ ಕೆಟ್ಟ ಸಂದೇಶ ನೀಡಿದಂತಾಗುತ್ತದೆ,’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>