‘ಶಾಸಕರಾದ ರಮೇಶ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ತಮ್ಮ ಗುಂಪಿನ ಅಭ್ಯರ್ಥಿಯನ್ನಾಗಿ ಲಖನ್ ಜಾರಕಿಹೊಳಿ ಕಣಕ್ಕಿಳಿಸಿದ್ದಾರೆ. ನಾಮಪತ್ರ ಸಲ್ಲಿಸಿದ ಮೊದಲ ದಿನದಿಂದಲೂ ಅವರು ಕಾಂಗ್ರೆಸ್ ವಿರುದ್ಧ ಒಂದಿಲ್ಲೊಂದು ಕಾರಣಕ್ಕೆ ಆಕ್ರಮಣ ಮಾಡುತ್ತಲೇ ಬಂದಿದ್ದಾರೆ. ಚುನಾವಣಾ ಸಿಬ್ಬಂದಿಯು ಆಡಳಿತ ಪಕ್ಷದ ಅಭ್ಯರ್ಥಿ ಹಾಗೂ ಆ ಪಕ್ಷ ಬೆಂಬಲಿತ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತಿರುವುದು ಕಂಡುಬಂದಿದೆ. ಇದು, ಗೋಕಾಕ, ಅರಭಾವಿ ಹಾಗೂ ರಾಯಬಾಗ ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಪತ್ರದಲ್ಲಿ ದೂರಿದ್ದಾರೆ.