<p><strong>ಬೆಳಗಾವಿ: </strong>‘ಕಮಿಷನ್ ಕಿರುಕುಳ ನೀಡಿ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಏ.14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಇಲ್ಲಿನ ಹೋಟೆಲ್ನಲ್ಲಿ ಬುಧವಾರ ರಾತ್ರಿ ನಡೆದ ಸಭೆಯ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p>.<p>‘ಈಶ್ವರಪ್ಪ ರಾಜೀನಾಮೆ ಪಡೆಯುವುದು ಮುಖ್ಯವಲ್ಲ, ಅವರನ್ನು ಬಂಧಿಸಬೇಕು ಎನ್ನುವುದು ನಮ್ಮ ಪ್ರಮುಖ ಆಗ್ರಹವಾಗಿದೆ’ ಎಂದರು.</p>.<p>‘ಏ. 15ರಿಂದ 20ರವರೆಗೆ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಜಿಲ್ಲೆಗಳ ಪ್ರವಾಸ ಮಾಡಲಿದ್ದೇವೆ. ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸುತ್ತೇವೆ’ ಎಂದು ಹೇಳಿದರು.</p>.<p>‘ಸಂತೋಷ್ ಕುಟುಂಬದವರನ್ನು ಹತ್ತಿಕ್ಕಲು ಪ್ರಯತ್ನ ನಡೆದಿದೆ ಎಂದು ಕೆಲವು ಮಾಹಿತಿ ಬಂದಿದೆ. ಸಾಕ್ಷ್ಯ ಇಲ್ಲದೆ ಮಾತನಾಡುವುದು ಸರಿಯಲ್ಲ. ಸಚಿವರ ವಿರುದ್ಧ ಮೃತನ ತಾಯಿ, ಪತ್ನಿಯೆ ನೇರವಾಗಿಯೇ ಆರೋಪಿಸಿದ್ದಾರೆ. ಅದನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಕಮಿಷನ್ ಕಿರುಕುಳ ನೀಡಿ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಏ.14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.</p>.<p>ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಇಲ್ಲಿನ ಹೋಟೆಲ್ನಲ್ಲಿ ಬುಧವಾರ ರಾತ್ರಿ ನಡೆದ ಸಭೆಯ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p>.<p>‘ಈಶ್ವರಪ್ಪ ರಾಜೀನಾಮೆ ಪಡೆಯುವುದು ಮುಖ್ಯವಲ್ಲ, ಅವರನ್ನು ಬಂಧಿಸಬೇಕು ಎನ್ನುವುದು ನಮ್ಮ ಪ್ರಮುಖ ಆಗ್ರಹವಾಗಿದೆ’ ಎಂದರು.</p>.<p>‘ಏ. 15ರಿಂದ 20ರವರೆಗೆ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಜಿಲ್ಲೆಗಳ ಪ್ರವಾಸ ಮಾಡಲಿದ್ದೇವೆ. ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸುತ್ತೇವೆ’ ಎಂದು ಹೇಳಿದರು.</p>.<p>‘ಸಂತೋಷ್ ಕುಟುಂಬದವರನ್ನು ಹತ್ತಿಕ್ಕಲು ಪ್ರಯತ್ನ ನಡೆದಿದೆ ಎಂದು ಕೆಲವು ಮಾಹಿತಿ ಬಂದಿದೆ. ಸಾಕ್ಷ್ಯ ಇಲ್ಲದೆ ಮಾತನಾಡುವುದು ಸರಿಯಲ್ಲ. ಸಚಿವರ ವಿರುದ್ಧ ಮೃತನ ತಾಯಿ, ಪತ್ನಿಯೆ ನೇರವಾಗಿಯೇ ಆರೋಪಿಸಿದ್ದಾರೆ. ಅದನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>