ಐಗಳಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಐಗಳಿ ಕ್ರಾಸ್ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಿದರು.
ನೇತೃತ್ವ ವಹಿಸಿದ್ದ ತೆಲಸಂಗ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಚಿದಾನಂದ ತಳಕೇರಿ, ‘ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಬಾರಿ ಪ್ರಮಾಣದಲ್ಲಿ ಇಳಿಕೆ ಕಂಡಿದ್ದರೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಅಗತ್ಯ ವಸ್ತುಗಳ ಬೆಲೆಯೂ ಏರಿಕೆ ಆಗಿರುವುದರಿದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರವು ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ’ ಎಂದು ದೂರಿದರು.