<p><strong>ಚಿಕ್ಕೋಡಿ:</strong> ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಅಧಿಕಾರಿಗಳು ಹಾಗೂ ವಿವಿಧ ಸಮಾಜದ ಮುಖಂಡರು ಸಂವಿಧಾನ ಜಾಗೃತಿ ಜಾಥಾ ಹಾಗೂ ಡಾ.ಅಂಬೇಡ್ಕರ್ ಸ್ಥಬ್ದ ಚಿತ್ರವನ್ನು ಶನಿವಾರ ವಿವಿಧ ವಾದ್ಯ ಮೇಳದೊಂದಿಗೆ ಸ್ವಾಗತಿಸಿದರು.</p>.<p>ಭಾನುವಾರ ಬೆಳಿಗ್ಗೆ ಮೆರವಣಿಗೆ ಪಟ್ಟಣದ ಮಾತಂಗಿಕೇರಿ ಗಲ್ಲಿ, ಪುರಸಭೆ ಕಚೇರಿ, ಕೇಂದ್ರ ಬಸ್ ನಿಲ್ದಾಣ, ಬಸವ ವೃತ್ತವನ್ನು ಬಳಸಿಕೊಂಡು ಸರ್ಕಾರಿ ಮಾದರಿ ಕನ್ನಡ ಶಾಲೆ ತಲುಪಿತು.</p>.<p>ಜಾಥಾದಲ್ಲಿ ಭಾಗವಹಿಸಿದ್ದ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ‘ಸಂವಿಧಾನವು ಸಮಾನತೆ ಭ್ರಾತೃತ್ವ, ರಾಷ್ಟ್ರೀಯ ಏಕತೆ ತರುವಲ್ಲಿ ತನ್ನದೇ ಆದ ಪಾತ್ರವಹಿಸಿದೆ. ಸಂವಿಧಾನದ ಮಹತ್ವವನ್ನು ಮನೆ ಮನೆಗೆ ತಲುಪಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಜಾಗೃತಿ ಜಾಥಾ ಮೂಲಕ ಮಾಡುತ್ತಿದೆ’ ಎಂದು ಹೇಳಿದರು.</p>.<p>ತಹಶೀಲ್ದಾರ್ ಚಿದಂಬರ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ. ಮೇಕನಮರಡಿ ಸಂವಿಧಾನ ಪೀಠಿಕೆ ಓದಿ, ಪ್ರತಿಜ್ಞಾ ವಿಧಿ ಬೋಧಿಸಿದರು.</p>.<p>ಪುರಸಭೆ ಸದಸ್ಯರಾದ ಶ್ಯಾಮ ರೇವಡೆ, ಪ್ರವೀಣ ಕಾಂಬಳೆ, ಸಂಜಯ ಕವಟಗಿಮಠ, ತಾನಾಜಿ ಕದಂ, ಸಂತೋಷ ಜೋಗಳೆ, ಸಿಡಿಪಿಒ ಭಾರತಿ ಕಾಂಬಳೆ, ಬಿಸಿಎಂ ಇಲಾಖಾಧಿಕಾರಿ ವೀಣಾ ಮನಗೂಳಿ, ಮುಖಂಡರಾದ ಅಶೋಕ ಭಂಡಾರಕರ, ಸುದರ್ಶನ ತಮ್ಮಣ್ಣವರ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.</p>.<p>ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರವೀಣ ಪಾಟೀಲ ಸ್ವಾಗತಿಸಿ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ನಿಡವಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ಅಧಿಕಾರಿಗಳು ಹಾಗೂ ವಿವಿಧ ಸಮಾಜದ ಮುಖಂಡರು ಸಂವಿಧಾನ ಜಾಗೃತಿ ಜಾಥಾ ಹಾಗೂ ಡಾ.ಅಂಬೇಡ್ಕರ್ ಸ್ಥಬ್ದ ಚಿತ್ರವನ್ನು ಶನಿವಾರ ವಿವಿಧ ವಾದ್ಯ ಮೇಳದೊಂದಿಗೆ ಸ್ವಾಗತಿಸಿದರು.</p>.<p>ಭಾನುವಾರ ಬೆಳಿಗ್ಗೆ ಮೆರವಣಿಗೆ ಪಟ್ಟಣದ ಮಾತಂಗಿಕೇರಿ ಗಲ್ಲಿ, ಪುರಸಭೆ ಕಚೇರಿ, ಕೇಂದ್ರ ಬಸ್ ನಿಲ್ದಾಣ, ಬಸವ ವೃತ್ತವನ್ನು ಬಳಸಿಕೊಂಡು ಸರ್ಕಾರಿ ಮಾದರಿ ಕನ್ನಡ ಶಾಲೆ ತಲುಪಿತು.</p>.<p>ಜಾಥಾದಲ್ಲಿ ಭಾಗವಹಿಸಿದ್ದ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ‘ಸಂವಿಧಾನವು ಸಮಾನತೆ ಭ್ರಾತೃತ್ವ, ರಾಷ್ಟ್ರೀಯ ಏಕತೆ ತರುವಲ್ಲಿ ತನ್ನದೇ ಆದ ಪಾತ್ರವಹಿಸಿದೆ. ಸಂವಿಧಾನದ ಮಹತ್ವವನ್ನು ಮನೆ ಮನೆಗೆ ತಲುಪಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಜಾಗೃತಿ ಜಾಥಾ ಮೂಲಕ ಮಾಡುತ್ತಿದೆ’ ಎಂದು ಹೇಳಿದರು.</p>.<p>ತಹಶೀಲ್ದಾರ್ ಚಿದಂಬರ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ. ಮೇಕನಮರಡಿ ಸಂವಿಧಾನ ಪೀಠಿಕೆ ಓದಿ, ಪ್ರತಿಜ್ಞಾ ವಿಧಿ ಬೋಧಿಸಿದರು.</p>.<p>ಪುರಸಭೆ ಸದಸ್ಯರಾದ ಶ್ಯಾಮ ರೇವಡೆ, ಪ್ರವೀಣ ಕಾಂಬಳೆ, ಸಂಜಯ ಕವಟಗಿಮಠ, ತಾನಾಜಿ ಕದಂ, ಸಂತೋಷ ಜೋಗಳೆ, ಸಿಡಿಪಿಒ ಭಾರತಿ ಕಾಂಬಳೆ, ಬಿಸಿಎಂ ಇಲಾಖಾಧಿಕಾರಿ ವೀಣಾ ಮನಗೂಳಿ, ಮುಖಂಡರಾದ ಅಶೋಕ ಭಂಡಾರಕರ, ಸುದರ್ಶನ ತಮ್ಮಣ್ಣವರ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.</p>.<p>ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರವೀಣ ಪಾಟೀಲ ಸ್ವಾಗತಿಸಿ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ನಿಡವಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>