<p><strong>ಮುಗಳಖೋಡ:</strong> ‘ಸಂವಿಧಾನ ರಕ್ಷಣೆಗಾಗಿ ದಸಂಸ (ಭೀಮವಾದ) ಜಿಲ್ಲಾ ಘಟಕದಿಂದ ಸಂವಿಧಾನ ಜಾಗೃತಿ ಸಮಾವೇಶವನ್ನು ರಾಯಬಾಗ ತಾಲ್ಲೂಕು ಹಿಡಕಲ್ ಗ್ರಾಮದಲ್ಲಿ ಫೆ. 26ರಂದು ಮಧ್ಯಾಕ್ಕೆ 2ಕ್ಕೆ ಏರ್ಪಡಿಸಲಾಗಿದೆ’ ಎಂದು ಜಿಲ್ಲಾ ಘಟಕದ ಸಂಘಟನಾ ಸಂಚಾಲಕ ಸಂತೋಷ ಕಾಂಬಳೆ ತಿಳಿಸಿದರು.</p>.<p>ಇಲ್ಲಿ ಬುಧವಾರ ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಡಾ.ಬಿ.ಆರ್. ಅಂಬೇಡ್ಕರ್ ಬರೆದಿರುವ ಸಂವಿಧಾನ ಸರ್ವಕಾಲಕ್ಕೂ ಶ್ರೇಷ್ಠ ಹಾಗೂ ಸರ್ವ ಜನಾಂಗದ ಅಭ್ಯುದಯಕ್ಕೆ ರಚಿತವಾಗಿರುವ ಗ್ರಂಥವಾಗಿದೆ. ಅದನ್ನು ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>‘ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಧಾನಪರಿಷತ್ ಸದಸ್ಯ ವಿವೇಕರಾವ ಪಾಟೀಲ ಮುಖ್ಯಅತಿಥಿಯಾಗಿ ಭಾಗವಹಿಸುವರು. ದಸಂಸ (ಭೀಮವಾದ) ರಾಜ್ಯ ಸಂಚಾಲಕ ಪರಶುರಾಮ ನೀಲನಾಯಕ ಅಧ್ಯಕ್ಷತೆ ವಹಿಸುವರು. ಮುಖಂಡರಾದ ಮಹಾವೀರ ಮೋಹಿತೆ,<br />ಸುರೇಶ ತಳವಾರ, ಸಿದ್ದಾರ್ಥ ಸಿಂಗೆ, ಚಿದಾನಂದ ತಳಕೇರಿ, ಸಂಜೀವ ಕಾಂಬಳೆ ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 11ಕ್ಕೆ ಮುಗಳಖೋಡದಿಂದ ಹಿಡಕಲ್ವರೆಗೆ ದ್ವಿಚಕ್ರವಾಹನಗಳ ರ್ಯಾಲಿ ನಡೆಲಾಗುವುದು’ ಎಂದು ತಿಳಿಸಿದರು.</p>.<p>ಮುಖಂಡರಾದ ಅಣ್ಣಪ್ಪ ಸೊಂಟನ್ನವರ, ದಯಾನಂದ ಕಾಳೆ, ರಾಮಪ್ಪ ಸರಿಕರ, ಲಕ್ಷ್ಮಣ ಕುರಾಡೆ, ಪ್ರವೀಣ ದೇವನ್ನವರ, ಸುಕುಮಾರ ಕುರಾಡೆ, ಕುಮಾರ ಸೊಂಟನ್ನವರ, ಯಲ್ಲಪ್ಪ ಚೌಡಕಿ, ಶಾಮ ಹಾದಿಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಗಳಖೋಡ:</strong> ‘ಸಂವಿಧಾನ ರಕ್ಷಣೆಗಾಗಿ ದಸಂಸ (ಭೀಮವಾದ) ಜಿಲ್ಲಾ ಘಟಕದಿಂದ ಸಂವಿಧಾನ ಜಾಗೃತಿ ಸಮಾವೇಶವನ್ನು ರಾಯಬಾಗ ತಾಲ್ಲೂಕು ಹಿಡಕಲ್ ಗ್ರಾಮದಲ್ಲಿ ಫೆ. 26ರಂದು ಮಧ್ಯಾಕ್ಕೆ 2ಕ್ಕೆ ಏರ್ಪಡಿಸಲಾಗಿದೆ’ ಎಂದು ಜಿಲ್ಲಾ ಘಟಕದ ಸಂಘಟನಾ ಸಂಚಾಲಕ ಸಂತೋಷ ಕಾಂಬಳೆ ತಿಳಿಸಿದರು.</p>.<p>ಇಲ್ಲಿ ಬುಧವಾರ ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಡಾ.ಬಿ.ಆರ್. ಅಂಬೇಡ್ಕರ್ ಬರೆದಿರುವ ಸಂವಿಧಾನ ಸರ್ವಕಾಲಕ್ಕೂ ಶ್ರೇಷ್ಠ ಹಾಗೂ ಸರ್ವ ಜನಾಂಗದ ಅಭ್ಯುದಯಕ್ಕೆ ರಚಿತವಾಗಿರುವ ಗ್ರಂಥವಾಗಿದೆ. ಅದನ್ನು ಉಳಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>‘ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಧಾನಪರಿಷತ್ ಸದಸ್ಯ ವಿವೇಕರಾವ ಪಾಟೀಲ ಮುಖ್ಯಅತಿಥಿಯಾಗಿ ಭಾಗವಹಿಸುವರು. ದಸಂಸ (ಭೀಮವಾದ) ರಾಜ್ಯ ಸಂಚಾಲಕ ಪರಶುರಾಮ ನೀಲನಾಯಕ ಅಧ್ಯಕ್ಷತೆ ವಹಿಸುವರು. ಮುಖಂಡರಾದ ಮಹಾವೀರ ಮೋಹಿತೆ,<br />ಸುರೇಶ ತಳವಾರ, ಸಿದ್ದಾರ್ಥ ಸಿಂಗೆ, ಚಿದಾನಂದ ತಳಕೇರಿ, ಸಂಜೀವ ಕಾಂಬಳೆ ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 11ಕ್ಕೆ ಮುಗಳಖೋಡದಿಂದ ಹಿಡಕಲ್ವರೆಗೆ ದ್ವಿಚಕ್ರವಾಹನಗಳ ರ್ಯಾಲಿ ನಡೆಲಾಗುವುದು’ ಎಂದು ತಿಳಿಸಿದರು.</p>.<p>ಮುಖಂಡರಾದ ಅಣ್ಣಪ್ಪ ಸೊಂಟನ್ನವರ, ದಯಾನಂದ ಕಾಳೆ, ರಾಮಪ್ಪ ಸರಿಕರ, ಲಕ್ಷ್ಮಣ ಕುರಾಡೆ, ಪ್ರವೀಣ ದೇವನ್ನವರ, ಸುಕುಮಾರ ಕುರಾಡೆ, ಕುಮಾರ ಸೊಂಟನ್ನವರ, ಯಲ್ಲಪ್ಪ ಚೌಡಕಿ, ಶಾಮ ಹಾದಿಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>