<p><strong>ಚಿಕ್ಕೋಡಿ</strong>: ‘ಕಳೆದ ಎರಡು ವರ್ಷಗಳಲ್ಲಿ ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ₹30 ಕೋಟಿ ಮೊತ್ತದಲ್ಲಿ 171 ಶಾಲಾ ಕೊಠಡಿ, ತಲಾ ₹50 ಲಕ್ಷ ಅನುದಾನದಲ್ಲಿ 3 ಪಿಯು ಕಾಲೇಜು ಕಟ್ಟಡಗಳು ನಿರ್ಮಾಣವಾಗುತ್ತಿವೆ’ ಎಂದು ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಹೇಳಿದರು.</p>.<p>ಪಟ್ಟಣದ ಹೊರ ವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಚಿಕ್ಕೋಡಿ ಸಹಯೋಗದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೂರ, ಚಿಕ್ಕೋಡಿ ಹಾಗೂ ಖಡಕಲಾಟದಲ್ಲಿ ಪಬ್ಲಿಕ್ ಶಾಲೆ ತೆರೆಯಲು ಉದ್ದೇಶಿಸಿದ್ದು, ಈಗಾಗಲೇ ಕೆರೂರ ಗ್ರಾಮದ ಪಬ್ಲಿಕ್ ಶಾಲೆಗೆ ₹2.5 ಕೋಟಿ ಬಿಡುಗಡೆಯಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ‘ಜನಗಣತಿ, ಮತದಾರರ ನೋಂದಣಿ ಸೇರಿದಂತೆ ಶಿಕ್ಷಕರ ಬಾಹ್ಯ ಕೆಲಸದ ಹೊರೆ ಕಡಿಮೆ ಮಾಡಿ ಕಲಿಕೆಯೆಲ್ಲಿ ತೊಡಗಿಸಿಕೊಳ್ಳುವ ನಿಯಮಗಳನ್ನು ಶೀಘ್ರದಲ್ಲಿಯೇ ಜಾರಿಗೆ ತರಲು ನಿರ್ಧರಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ ವಾಯವ್ಯ ಶಿಕ್ಷಕರ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಜಿಲ್ಲೆಗಳ ಪ್ರೌಢ ಶಾಲೆಗಳಿಗೆ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಲ್ಯಾಪಟಾಪ್ ಗಳನ್ನು ವಿತರಿಸಿದರು. ಬೆಳಗಾವಿ ಜಿಲ್ಲಾ ವ್ಯಾಪ್ತಿಯ 7 ಶಾಲೆಗಳಿಗೆ 17 ಕೊಠಡಿಗಳ ಮಂಜೂರಾತಿ ಆದೇಶ ಪ್ರತಿ ನೀಡಿದರು. ಚಿಕ್ಕೋಡಿ ಶೈಕ್ಷಣಿ ಜಿಲ್ಲಾ ಮಟ್ಟದಲ್ಲಿ ನಿವೃತ್ತರಾದ ಶಿಕ್ಷಕರ ಸನ್ಮಾನ ಹಾಗೂ 2024ನೇ ಸಾಲಿನಲ್ಲಿ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.</p>.<p>ಚಿಕ್ಕೋಡಿ ಚರಮೂರ್ತಿ ಮಠದ ಸಂಪಾದನಾ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿದರು. ಡಿಡಿಪಿಐ ಬಿ.ಎ.ಮೇಕನಮರಡಿ, ಡಿಡಿಪಿಯು ಪಾಂಡುರಂಗ ಭಂಡಾರಿ, ತಹಶೀಲ್ದಾರ್ ಚಿದಂಬರ ಕುಲಕರ್ಣಿ, ಪುರಸಭೆ ಸದಸ್ಯರಾದ ರಾಮಾ ಮಾನೆ, ಗುಲಾಬಹುಸೇನ ಬಾಗವಾನ, ಸಾಬೀರ ಜಮಾದಾರ, ಬಾಹುಬಲಿ ಲಕ್ಕನ್ನವರ, ಜಿ.ಎಂ.ಕಾಂಬಳೆ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ</strong>: ‘ಕಳೆದ ಎರಡು ವರ್ಷಗಳಲ್ಲಿ ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ₹30 ಕೋಟಿ ಮೊತ್ತದಲ್ಲಿ 171 ಶಾಲಾ ಕೊಠಡಿ, ತಲಾ ₹50 ಲಕ್ಷ ಅನುದಾನದಲ್ಲಿ 3 ಪಿಯು ಕಾಲೇಜು ಕಟ್ಟಡಗಳು ನಿರ್ಮಾಣವಾಗುತ್ತಿವೆ’ ಎಂದು ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಹೇಳಿದರು.</p>.<p>ಪಟ್ಟಣದ ಹೊರ ವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಚಿಕ್ಕೋಡಿ ಸಹಯೋಗದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೂರ, ಚಿಕ್ಕೋಡಿ ಹಾಗೂ ಖಡಕಲಾಟದಲ್ಲಿ ಪಬ್ಲಿಕ್ ಶಾಲೆ ತೆರೆಯಲು ಉದ್ದೇಶಿಸಿದ್ದು, ಈಗಾಗಲೇ ಕೆರೂರ ಗ್ರಾಮದ ಪಬ್ಲಿಕ್ ಶಾಲೆಗೆ ₹2.5 ಕೋಟಿ ಬಿಡುಗಡೆಯಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ‘ಜನಗಣತಿ, ಮತದಾರರ ನೋಂದಣಿ ಸೇರಿದಂತೆ ಶಿಕ್ಷಕರ ಬಾಹ್ಯ ಕೆಲಸದ ಹೊರೆ ಕಡಿಮೆ ಮಾಡಿ ಕಲಿಕೆಯೆಲ್ಲಿ ತೊಡಗಿಸಿಕೊಳ್ಳುವ ನಿಯಮಗಳನ್ನು ಶೀಘ್ರದಲ್ಲಿಯೇ ಜಾರಿಗೆ ತರಲು ನಿರ್ಧರಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಇದೇ ಸಂದರ್ಭದಲ್ಲಿ ವಾಯವ್ಯ ಶಿಕ್ಷಕರ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಜಿಲ್ಲೆಗಳ ಪ್ರೌಢ ಶಾಲೆಗಳಿಗೆ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಲ್ಯಾಪಟಾಪ್ ಗಳನ್ನು ವಿತರಿಸಿದರು. ಬೆಳಗಾವಿ ಜಿಲ್ಲಾ ವ್ಯಾಪ್ತಿಯ 7 ಶಾಲೆಗಳಿಗೆ 17 ಕೊಠಡಿಗಳ ಮಂಜೂರಾತಿ ಆದೇಶ ಪ್ರತಿ ನೀಡಿದರು. ಚಿಕ್ಕೋಡಿ ಶೈಕ್ಷಣಿ ಜಿಲ್ಲಾ ಮಟ್ಟದಲ್ಲಿ ನಿವೃತ್ತರಾದ ಶಿಕ್ಷಕರ ಸನ್ಮಾನ ಹಾಗೂ 2024ನೇ ಸಾಲಿನಲ್ಲಿ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.</p>.<p>ಚಿಕ್ಕೋಡಿ ಚರಮೂರ್ತಿ ಮಠದ ಸಂಪಾದನಾ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿದರು. ಡಿಡಿಪಿಐ ಬಿ.ಎ.ಮೇಕನಮರಡಿ, ಡಿಡಿಪಿಯು ಪಾಂಡುರಂಗ ಭಂಡಾರಿ, ತಹಶೀಲ್ದಾರ್ ಚಿದಂಬರ ಕುಲಕರ್ಣಿ, ಪುರಸಭೆ ಸದಸ್ಯರಾದ ರಾಮಾ ಮಾನೆ, ಗುಲಾಬಹುಸೇನ ಬಾಗವಾನ, ಸಾಬೀರ ಜಮಾದಾರ, ಬಾಹುಬಲಿ ಲಕ್ಕನ್ನವರ, ಜಿ.ಎಂ.ಕಾಂಬಳೆ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>