<p><strong>ಗೋಕಾಕ:</strong> ‘ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಲಭಿಸುತ್ತದೆ. ಪ್ರಯತ್ನವಿಲ್ಲದೇ ಏನನ್ನೂ ಸಾಧಿಸಲು ಸಾಧ್ಯವಿಲ್ಲ’ ಎಂದು ಕವಿ, ಶಿಕ್ಷಕ ಈಶ್ವರ ಮಮದಾಪುರ ಹೇಳಿದರು.</p>.<p>ತಾಲ್ಲೂಕಿನ ಬೆಣಚಿನಮರ್ಡಿ (ಉ) ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿ.ಯು. ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. </p>.<p>‘ಪುಸ್ತಕವೇ ನಿಜವಾದ ವಿದ್ಯಾರ್ಥಿಗಳ ಮಿತ್ರ ಹಾಗೂ ಮಾರ್ಗದರ್ಶಕವಾಗಿದ್ದು ವಿದ್ಯಾರ್ಥಿಗಳು ಮೊಬೈಲ್ ಗೀಳನ್ನು ತೊರೆದು ಪುಸ್ತಕದ ಹುಳುಗಳಾಗಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಉರುಬಿನಹಟ್ಟಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎನ್.ಆರ್.ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುರಿಯನ್ನಿಟ್ಟುಕೊಂಡು ಮುಂದೆ ಸಾಗಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಕುಮಾರಿ ಎ.ಬಿ. ಭರಮಗೌಡರ, ಉಪನ್ಯಾಸಕರಾದ ಪ್ರತಾಪ ಕೊಪ್ಪದ, ಎಂ.ಎನ್.ಧೂಳಿ, ಎಸ್.ಆರ್. ಮಾಳಗಿ, ಎಫ್.ಬಿ.ಯರಗಟ್ಟಿ, ಉಪನ್ಯಾಸಕ ಆರ್.ಬಿ.ವಾಜಂತ್ರಿ ಇದ್ದರು.</p>.<p>ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕಾಕ:</strong> ‘ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಲಭಿಸುತ್ತದೆ. ಪ್ರಯತ್ನವಿಲ್ಲದೇ ಏನನ್ನೂ ಸಾಧಿಸಲು ಸಾಧ್ಯವಿಲ್ಲ’ ಎಂದು ಕವಿ, ಶಿಕ್ಷಕ ಈಶ್ವರ ಮಮದಾಪುರ ಹೇಳಿದರು.</p>.<p>ತಾಲ್ಲೂಕಿನ ಬೆಣಚಿನಮರ್ಡಿ (ಉ) ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿ.ಯು. ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. </p>.<p>‘ಪುಸ್ತಕವೇ ನಿಜವಾದ ವಿದ್ಯಾರ್ಥಿಗಳ ಮಿತ್ರ ಹಾಗೂ ಮಾರ್ಗದರ್ಶಕವಾಗಿದ್ದು ವಿದ್ಯಾರ್ಥಿಗಳು ಮೊಬೈಲ್ ಗೀಳನ್ನು ತೊರೆದು ಪುಸ್ತಕದ ಹುಳುಗಳಾಗಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಉರುಬಿನಹಟ್ಟಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎನ್.ಆರ್.ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುರಿಯನ್ನಿಟ್ಟುಕೊಂಡು ಮುಂದೆ ಸಾಗಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಕುಮಾರಿ ಎ.ಬಿ. ಭರಮಗೌಡರ, ಉಪನ್ಯಾಸಕರಾದ ಪ್ರತಾಪ ಕೊಪ್ಪದ, ಎಂ.ಎನ್.ಧೂಳಿ, ಎಸ್.ಆರ್. ಮಾಳಗಿ, ಎಫ್.ಬಿ.ಯರಗಟ್ಟಿ, ಉಪನ್ಯಾಸಕ ಆರ್.ಬಿ.ವಾಜಂತ್ರಿ ಇದ್ದರು.</p>.<p>ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>