<p><strong>ಬೆಳಗಾವಿ:</strong> ‘ವೈದ್ಯರಿಗೆ ಹೊಸ ಸಂಶೋಧನೆಗಳ ಅರಿವು ಅಗತ್ಯ. ಅದರಲ್ಲೂ ಮಕ್ಕಳ ವೈದ್ಯರು ಹೆಚ್ಚಿನ ಚಟುವಟಿಕೆಯಿಂದ ಇರಬೇಕಾಗುತ್ತದೆ’ ಎಂದು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಶಿವಾನಂದ ಸಲಹೆ ನೀಡಿದರು.</p>.<p>ಇಲ್ಲಿನ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಾರ್ಷಿಕ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಂದಿನ ವೈದ್ಯ ವಿಜ್ಞಾನದಲ್ಲಿ ನಿರಂತರ ಸಂಶೋಧನೆಗಳು ನಡೆಯುತ್ತಿರುತ್ತವೆ. ಅದನ್ನು ಇಂದಿನ ಯುವ ವೈದ್ಯರು ಅರಿಯಬೇಕು. ವೃತ್ತಿ ಜೀವನದಲ್ಲಿ ಬರುವ ತೊಡಕುಗಳನ್ನು ಮೆಟ್ಟಿ ನಿಂತು, ರೋಗ ಗುಣಪಡಿಸುವಲ್ಲಿ ಪಾರಂಗತರಾಗಬೇಕು. ಸೂಕ್ತ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಬೇಕು’ ಎಂದು ತಿಳಿಸಿದರು.</p>.<p>ಮುಖ್ಯ ಅತಿಥಿಯಾಗಿದ್ದ ಡಾ.ವಿ.ಡಿ. ಪಾಟೀಲ, ‘ಪುಸ್ತಕಗಳಿಂದ ಅರಿಯಲಾಗದ ವಿಷಯ, ವಿಚಾರ ಹಾಗೂ ವಿಧಾನಗಳನ್ನು ಜಗತ್ತಿಗೆ ತೋರಲು ಹಾಗೂ ವೈದ್ಯಕೀಯ ಜ್ಞಾನದ ಅನುಭವ ಹಂಚಿಕೊಳ್ಳಲು ಇಂತಹ ಕಾರ್ಯಕ್ರಮಗಳು ಅತ್ಯಗತ್ಯವಾಗಿವೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಹಿರಿಯ ವೈದ್ಯ ಡಾ.ಎಚ್.ಬಿ. ರಾಜಶೇಖರ ಮಾತನಾಡಿ, ‘ಪಡೆದ ಜ್ಞಾನವನ್ನು ಒರೆಗೆ ಹಚ್ಚಿದಾಗಲೇ ಅದರ ನಿಖರತೆಯ ಅರಿವು ತಿಳಿಯಲು ಸಾಧ್ಯ. ಪ್ರಶ್ನೆಗಳಿಗೆ ಉತ್ತರ ಹುಡುಕುವಾಗ ಅನೇಕ ವಿಷಯಗಳು ತಿಳಿದು ಬರುತ್ತವೆ’ ಎಂದು ಹೇಳಿದರು.</p>.<p>ಡಾ.ಶಿವಾನಂದ, ಡಾ.ವಿ.ಡಿ. ಪಾಟೀಲ, ಡಾ.ಎಚ್.ಬಿ. ರಾಜಶೇಖರ, ಡಾ.ಕಮರುದ್ದೀನ್ ಜಾಲಮ್, ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಎಸ್.ಸಿ. ಧಾರವಾಡ ಅವರನ್ನು ಸತ್ಕರಿಸಲಾಯಿತು.</p>.<p>ವೈದ್ಯರಾದ ಡಾ.ವಾರಿ, ಡಾ.ಸಂತೋಷ ಕುರಬೆಟ್, ಡಾ.ವಿಲಾಸ ಜಾಧವ, ಡಾ.ಜಾನಕಿ ವಿಶ್ವನಾಥ, ಡಾ.ವಿಜಯ ಕುಲಕರ್ಣಿ, ಡಾ.ಅರುಂಧತಿ ಪಾಟೀಲ ಉಪನ್ಯಾಸ ನೀಡಿದರು.</p>.<p>ಡಾ. ಶೈಲೇಶ ಪಾಟೀಲ, ಡಾ.ಬಿ.ಎಸ್. ಮಹಾಂತಶೆಟ್ಟಿ ಇದ್ದರು.</p>.<p>ಡಾ.ಸೌಮ್ಯಾ ವೇರ್ಣೇಕರ, ಡಾ.ಅನಿತಾ ಮೋದಗೆ ನಿರೂಪಿಸಿದರು. ಡಾ.ಪವನ ಪೂಜಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ವೈದ್ಯರಿಗೆ ಹೊಸ ಸಂಶೋಧನೆಗಳ ಅರಿವು ಅಗತ್ಯ. ಅದರಲ್ಲೂ ಮಕ್ಕಳ ವೈದ್ಯರು ಹೆಚ್ಚಿನ ಚಟುವಟಿಕೆಯಿಂದ ಇರಬೇಕಾಗುತ್ತದೆ’ ಎಂದು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಶಿವಾನಂದ ಸಲಹೆ ನೀಡಿದರು.</p>.<p>ಇಲ್ಲಿನ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಾರ್ಷಿಕ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಂದಿನ ವೈದ್ಯ ವಿಜ್ಞಾನದಲ್ಲಿ ನಿರಂತರ ಸಂಶೋಧನೆಗಳು ನಡೆಯುತ್ತಿರುತ್ತವೆ. ಅದನ್ನು ಇಂದಿನ ಯುವ ವೈದ್ಯರು ಅರಿಯಬೇಕು. ವೃತ್ತಿ ಜೀವನದಲ್ಲಿ ಬರುವ ತೊಡಕುಗಳನ್ನು ಮೆಟ್ಟಿ ನಿಂತು, ರೋಗ ಗುಣಪಡಿಸುವಲ್ಲಿ ಪಾರಂಗತರಾಗಬೇಕು. ಸೂಕ್ತ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಬೇಕು’ ಎಂದು ತಿಳಿಸಿದರು.</p>.<p>ಮುಖ್ಯ ಅತಿಥಿಯಾಗಿದ್ದ ಡಾ.ವಿ.ಡಿ. ಪಾಟೀಲ, ‘ಪುಸ್ತಕಗಳಿಂದ ಅರಿಯಲಾಗದ ವಿಷಯ, ವಿಚಾರ ಹಾಗೂ ವಿಧಾನಗಳನ್ನು ಜಗತ್ತಿಗೆ ತೋರಲು ಹಾಗೂ ವೈದ್ಯಕೀಯ ಜ್ಞಾನದ ಅನುಭವ ಹಂಚಿಕೊಳ್ಳಲು ಇಂತಹ ಕಾರ್ಯಕ್ರಮಗಳು ಅತ್ಯಗತ್ಯವಾಗಿವೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಹಿರಿಯ ವೈದ್ಯ ಡಾ.ಎಚ್.ಬಿ. ರಾಜಶೇಖರ ಮಾತನಾಡಿ, ‘ಪಡೆದ ಜ್ಞಾನವನ್ನು ಒರೆಗೆ ಹಚ್ಚಿದಾಗಲೇ ಅದರ ನಿಖರತೆಯ ಅರಿವು ತಿಳಿಯಲು ಸಾಧ್ಯ. ಪ್ರಶ್ನೆಗಳಿಗೆ ಉತ್ತರ ಹುಡುಕುವಾಗ ಅನೇಕ ವಿಷಯಗಳು ತಿಳಿದು ಬರುತ್ತವೆ’ ಎಂದು ಹೇಳಿದರು.</p>.<p>ಡಾ.ಶಿವಾನಂದ, ಡಾ.ವಿ.ಡಿ. ಪಾಟೀಲ, ಡಾ.ಎಚ್.ಬಿ. ರಾಜಶೇಖರ, ಡಾ.ಕಮರುದ್ದೀನ್ ಜಾಲಮ್, ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಎಸ್.ಸಿ. ಧಾರವಾಡ ಅವರನ್ನು ಸತ್ಕರಿಸಲಾಯಿತು.</p>.<p>ವೈದ್ಯರಾದ ಡಾ.ವಾರಿ, ಡಾ.ಸಂತೋಷ ಕುರಬೆಟ್, ಡಾ.ವಿಲಾಸ ಜಾಧವ, ಡಾ.ಜಾನಕಿ ವಿಶ್ವನಾಥ, ಡಾ.ವಿಜಯ ಕುಲಕರ್ಣಿ, ಡಾ.ಅರುಂಧತಿ ಪಾಟೀಲ ಉಪನ್ಯಾಸ ನೀಡಿದರು.</p>.<p>ಡಾ. ಶೈಲೇಶ ಪಾಟೀಲ, ಡಾ.ಬಿ.ಎಸ್. ಮಹಾಂತಶೆಟ್ಟಿ ಇದ್ದರು.</p>.<p>ಡಾ.ಸೌಮ್ಯಾ ವೇರ್ಣೇಕರ, ಡಾ.ಅನಿತಾ ಮೋದಗೆ ನಿರೂಪಿಸಿದರು. ಡಾ.ಪವನ ಪೂಜಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>