ಕಳೆದ 17 ವರ್ಷಗಳಿಂದ ರಾಜ್ಯದಾದ್ಯಂತ ಭಗವದ್ಗೀತೆ ಅಭಿಯಾನ ನಡೆಸುತ್ತಿರುವ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳೊಂದಿಗೆ ಮಂಗಳವಾರ ಸಂಜೆ, ಚರ್ಚಿಸಿದ ಅವರು, ‘ಅಭಿಯಾನ ಯಾವುದೇ ವಿಘ್ನಗಳಿಲ್ಲದೆ ಯಶಸ್ವಿಯಾಗಿ ನಡೆಯಲಿದೆ. ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಸ್ವಾಮೀಜಿ ಮಾರ್ಗದರ್ಶನದಂತೆ ಶ್ಲೋಕ ಪಠಣ, ಪ್ರವಚನ, ವಿಚಾರಸಂಕಿರಣ, ಗೀತಾ ಸಮನ್ವಯ ಕಾರ್ಯಕ್ರಮ ಹಾಗೂ ಮಹಾಸಮರ್ಪಣೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳನ್ನು ಸುವ್ಯವಸ್ಥಿತವಾಗಿ ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.