ಹಿಂದಿನ ವರ್ಷಗಳಲ್ಲಿ ದೇವಸ್ಥಾನಗಳಲ್ಲಿ, ಮಠಗಳಲ್ಲಿ ಶ್ರಾವಣ ಮಾಸದ ಮೊದಲ ಸೋಮವಾರದ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗುತ್ತಿತ್ತು. ಪ್ರವಚನ ಇರುತ್ತಿತ್ತು. ನೂರಾರು ಭಕ್ತರು ನೆರೆಯುತ್ತಿದ್ದರು. ಆದರೆ, ಈ ಬಾರಿ ದೇಗುಲಗಳಲ್ಲಿ ಪೂಜೆ–ಪುನಸ್ಕಾರಗಳಿಗಷ್ಟೇ ಸೀಮಿತವಾಯಿತು. ಮೂರ್ತಿಗಳನ್ನು ಸರಳವಾಗಿ ಅಲಂಕರಿಸಲಾಗಿತ್ತು. ಬೆರಳೆಣಿಕೆಯ ಭಕ್ತರಷ್ಟೇ ಕಂಡುಬಂದರು.