<p><strong>ಬೆಳಗಾವಿ</strong>: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಶ್ರಾವಣ ಮಾಸದ ಮೊದಲ ಸೋಮವಾರದ ಆಚರಣೆಯು ಕೊರೊನಾ ಸೋಂಕಿನ ಭೀತಿಯಿಂದಾಗಿ ಸರಳವಾಗಿತ್ತು.</p>.<p>ಹಿಂದಿನ ವರ್ಷಗಳಲ್ಲಿ ದೇವಸ್ಥಾನಗಳಲ್ಲಿ, ಮಠಗಳಲ್ಲಿ ಶ್ರಾವಣ ಮಾಸದ ಮೊದಲ ಸೋಮವಾರದ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗುತ್ತಿತ್ತು. ಪ್ರವಚನ ಇರುತ್ತಿತ್ತು. ನೂರಾರು ಭಕ್ತರು ನೆರೆಯುತ್ತಿದ್ದರು. ಆದರೆ, ಈ ಬಾರಿ ದೇಗುಲಗಳಲ್ಲಿ ಪೂಜೆ–ಪುನಸ್ಕಾರಗಳಿಗಷ್ಟೇ ಸೀಮಿತವಾಯಿತು. ಮೂರ್ತಿಗಳನ್ನು ಸರಳವಾಗಿ ಅಲಂಕರಿಸಲಾಗಿತ್ತು. ಬೆರಳೆಣಿಕೆಯ ಭಕ್ತರಷ್ಟೇ ಕಂಡುಬಂದರು.</p>.<p>ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಲಾಕ್ಡೌನ್ ಇರುವುದರಿಂದ ಆ ಭಾಗದ ದೇಗುಲಗಳಲ್ಲಿ ಸಂಭ್ರಮವಿರಲಿಲ್ಲ. ಸವದತ್ತಿ ತಾಲ್ಲೂಕಿನ ಸುಕ್ಷೇತ್ರ ಜಾಲಿಕಟ್ಟಿ ಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಅಂಗವಾಗಿ ಸಾರ್ವಜನಿಕರು ಪೂಜೆ ಸಲ್ಲಿಸಲು ಅವಕಾಶ ಇರಲಿಲ್ಲ.</p>.<p>ಮುನವಳ್ಳಿಯ ಸೋಮಶೇಖರ ಮಠದ ಮುರುಘರಾಜೇಂದ್ರ ಶ್ರೀಗಳ ಸಮ್ಮುಖದಲ್ಲಿ ಶ್ರಾವಣ ಮಾಸ ಅಂಗವಾಗಿ ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತಿದ್ದ ಪಥಸಂಚಲನವನ್ನು ಕೊರೊನಾ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ.</p>.<p>ನಿಪ್ಪಾಣಿಯಲ್ಲಿ ವೀರಶೈವ ಸಮಾಜ ಮತ್ತು ಮಹಾದೇವ ದೇವಸ್ಥಾನ ಟ್ರಸ್ಟ್ 16 ವರ್ಷಗಳಿಂದ ಪ್ರತಿ ಶ್ರಾವಣ ಮಾಸದಲ್ಲಿ ಹಮ್ಮಿಕೊಳ್ಳುತ್ತಿದ್ದ ಜಪನಾಮ ಕಾರ್ಯಕ್ರಮವನ್ನು ಈ ಬಾರಿ ರದ್ದುಗೊಳಿಸಲಾಯಿತು. ಹೂವಿನ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಶ್ರಾವಣ ಮಾಸದ ಮೊದಲ ಸೋಮವಾರದ ಆಚರಣೆಯು ಕೊರೊನಾ ಸೋಂಕಿನ ಭೀತಿಯಿಂದಾಗಿ ಸರಳವಾಗಿತ್ತು.</p>.<p>ಹಿಂದಿನ ವರ್ಷಗಳಲ್ಲಿ ದೇವಸ್ಥಾನಗಳಲ್ಲಿ, ಮಠಗಳಲ್ಲಿ ಶ್ರಾವಣ ಮಾಸದ ಮೊದಲ ಸೋಮವಾರದ ಅಂಗವಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲಾಗುತ್ತಿತ್ತು. ಪ್ರವಚನ ಇರುತ್ತಿತ್ತು. ನೂರಾರು ಭಕ್ತರು ನೆರೆಯುತ್ತಿದ್ದರು. ಆದರೆ, ಈ ಬಾರಿ ದೇಗುಲಗಳಲ್ಲಿ ಪೂಜೆ–ಪುನಸ್ಕಾರಗಳಿಗಷ್ಟೇ ಸೀಮಿತವಾಯಿತು. ಮೂರ್ತಿಗಳನ್ನು ಸರಳವಾಗಿ ಅಲಂಕರಿಸಲಾಗಿತ್ತು. ಬೆರಳೆಣಿಕೆಯ ಭಕ್ತರಷ್ಟೇ ಕಂಡುಬಂದರು.</p>.<p>ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಲಾಕ್ಡೌನ್ ಇರುವುದರಿಂದ ಆ ಭಾಗದ ದೇಗುಲಗಳಲ್ಲಿ ಸಂಭ್ರಮವಿರಲಿಲ್ಲ. ಸವದತ್ತಿ ತಾಲ್ಲೂಕಿನ ಸುಕ್ಷೇತ್ರ ಜಾಲಿಕಟ್ಟಿ ಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಅಂಗವಾಗಿ ಸಾರ್ವಜನಿಕರು ಪೂಜೆ ಸಲ್ಲಿಸಲು ಅವಕಾಶ ಇರಲಿಲ್ಲ.</p>.<p>ಮುನವಳ್ಳಿಯ ಸೋಮಶೇಖರ ಮಠದ ಮುರುಘರಾಜೇಂದ್ರ ಶ್ರೀಗಳ ಸಮ್ಮುಖದಲ್ಲಿ ಶ್ರಾವಣ ಮಾಸ ಅಂಗವಾಗಿ ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತಿದ್ದ ಪಥಸಂಚಲನವನ್ನು ಕೊರೊನಾ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ.</p>.<p>ನಿಪ್ಪಾಣಿಯಲ್ಲಿ ವೀರಶೈವ ಸಮಾಜ ಮತ್ತು ಮಹಾದೇವ ದೇವಸ್ಥಾನ ಟ್ರಸ್ಟ್ 16 ವರ್ಷಗಳಿಂದ ಪ್ರತಿ ಶ್ರಾವಣ ಮಾಸದಲ್ಲಿ ಹಮ್ಮಿಕೊಳ್ಳುತ್ತಿದ್ದ ಜಪನಾಮ ಕಾರ್ಯಕ್ರಮವನ್ನು ಈ ಬಾರಿ ರದ್ದುಗೊಳಿಸಲಾಯಿತು. ಹೂವಿನ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>