<p><strong>ಬೆಳಗಾವಿ:</strong> ‘ಕೊರೊನಾ ಸೋಂಕಿನಿಂದಾಗಿ ದೇಶವು ಎದುರಿಸುತ್ತಿರುವ ಪ್ರಸಕ್ತ ಬಿಕ್ಕಟ್ಟಿನಿಂದ ಪಾರಾಗಬೇಕಾದರೆ ಮೊದಲು ನಾವು ಬದಲಾಗಬೇಕು. ಪರಿಹಾರ ನಮ್ಮ ಕೈಯಲ್ಲೇ ಇದೆ’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಮಾರ್ಚ್ 23ರಿಂದ ಹಮ್ಮಿಕೊಂಡಿದ್ದ ‘ಹಸಿದವರತ್ತ ನಮ್ಮ ಚಿತ್ತ ಅಭಿಯಾನ’ದ ಶತದಿನೋತ್ಸವ ಮತ್ತು ಸಮಾರೋಪ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದರಿಂದ ಸೋಂಕಿನಿಂದ ದೂರ ಇರಬಹುದು’ ಎಂದರು.</p>.<p>ಕಾರಂಜಿ ಮಠದ ಗುರುಸಿದ್ಧ ಸ್ವಾಮೀಜಿ, ‘ಕೊರೊನಾ ವೈರಾಣುವಿಗೆ ಹೆದರಿ ಜನರೆಲ್ಲರೂ ಮನೆಯಲ್ಲಿ ಕುಳಿತಾಗ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ತಂಡವು ನೂರು ದಿನಗಳವರೆಗೆ ಸತತವಾಗಿ ಆಹಾರ ಧಾನ್ಯದ ಕಿಟ್ ವಿತರಿಸಿದ್ದು ಸಾಮಾನ್ಯ ಸಂಗತಿಯಲ್ಲ’ ಎಂದು ಶ್ಲಾಘಿಸಿದರು.</p>.<p>ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ, ‘ವಿಧಾನ ಪರಿಷತ್ತಿನಲ್ಲಿ ಗಡಿಭಾಗದಿಂದ ಗಟ್ಟಿಯಾದ ಧ್ವನಿಯ ಅಗತ್ಯವಿದೆ. ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಅವರನ್ನು ರಾಜ್ಯ ಸರ್ಕಾರ ಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>1980ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಇಲ್ಲಿನ ಲಿಂಗರಾಜ ಕಾಲೇಜು ಮೈದಾನದಲ್ಲಿ ಮಾಡಿದ್ದ ಭಾಷಣದ ಧ್ವನಿಮುದ್ರಿಕೆಯನ್ನು ಮಾರುತಿ ಚಂದರಗಿ ಅವರು ಸಿಡಿಗೆ ಪರಿವರ್ತಿಸಿದ್ದು, ಅವುಗಳನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಕರ್ನಾಟಕ ಮುಖ್ಯಸ್ಥ ರಾಘವೇಂದ್ರ ಕಾಗವಾಡ ಬಿಡುಗಡೆ ಮಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಧಾರವಾಡ ರಂಗಾಯಣ ನಿರ್ದೇಶಕ ರಮೇಶ ಪರವಿನಾಯ್ಕರ, ‘ಕ್ರಿಯಾ ಸಮಿತಿಯ ಅಭಿಯಾನದಿಂದ ಸ್ಫೂರ್ತಿ ಪಡೆದು ನಾನೂ ರಂಗಭೂಮಿಯ ಅನೇಕ ಕಲಾವಿದರಿಗೆ ಸಂಕಷ್ಟದ ಸಮಯದಲ್ಲಿ ನೆರವಿನ ಹಸ್ತ ಚಾಚಿದೆ’ ಎಂದರು.</p>.<p>ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರನ್ನು ಸನ್ಮಾನಿಸಲಾಯಿತು. ಅಭಿಯಾನದಲ್ಲಿ ಪಾಲ್ಗೊಂಡ 40 ಕಾರ್ಯಕರ್ತರು ಹಾಗೂ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರನ್ನು ಸತ್ಕರಿಸಲಾಯಿತು.</p>.<p>ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗೇನಟ್ಟಿ ಇದ್ದರು.</p>.<p>ಖುಷಿ ಢವಳಿ ಪ್ರಾರ್ಥನಾ ಗೀತೆ ಹಾಡಿದರು. ಗೋಪಾಲ ಖಟಾವಕರ ನಿರೂಪಿಸಿದರು. ಸಾಮಾಜಿಕ ಕಾರ್ಯಕರ್ತ ಶಂಕರ ಬಾಗೇವಾಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕೊರೊನಾ ಸೋಂಕಿನಿಂದಾಗಿ ದೇಶವು ಎದುರಿಸುತ್ತಿರುವ ಪ್ರಸಕ್ತ ಬಿಕ್ಕಟ್ಟಿನಿಂದ ಪಾರಾಗಬೇಕಾದರೆ ಮೊದಲು ನಾವು ಬದಲಾಗಬೇಕು. ಪರಿಹಾರ ನಮ್ಮ ಕೈಯಲ್ಲೇ ಇದೆ’ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಮಾರ್ಚ್ 23ರಿಂದ ಹಮ್ಮಿಕೊಂಡಿದ್ದ ‘ಹಸಿದವರತ್ತ ನಮ್ಮ ಚಿತ್ತ ಅಭಿಯಾನ’ದ ಶತದಿನೋತ್ಸವ ಮತ್ತು ಸಮಾರೋಪ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದರಿಂದ ಸೋಂಕಿನಿಂದ ದೂರ ಇರಬಹುದು’ ಎಂದರು.</p>.<p>ಕಾರಂಜಿ ಮಠದ ಗುರುಸಿದ್ಧ ಸ್ವಾಮೀಜಿ, ‘ಕೊರೊನಾ ವೈರಾಣುವಿಗೆ ಹೆದರಿ ಜನರೆಲ್ಲರೂ ಮನೆಯಲ್ಲಿ ಕುಳಿತಾಗ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ತಂಡವು ನೂರು ದಿನಗಳವರೆಗೆ ಸತತವಾಗಿ ಆಹಾರ ಧಾನ್ಯದ ಕಿಟ್ ವಿತರಿಸಿದ್ದು ಸಾಮಾನ್ಯ ಸಂಗತಿಯಲ್ಲ’ ಎಂದು ಶ್ಲಾಘಿಸಿದರು.</p>.<p>ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ, ‘ವಿಧಾನ ಪರಿಷತ್ತಿನಲ್ಲಿ ಗಡಿಭಾಗದಿಂದ ಗಟ್ಟಿಯಾದ ಧ್ವನಿಯ ಅಗತ್ಯವಿದೆ. ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಅವರನ್ನು ರಾಜ್ಯ ಸರ್ಕಾರ ಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>1980ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಇಲ್ಲಿನ ಲಿಂಗರಾಜ ಕಾಲೇಜು ಮೈದಾನದಲ್ಲಿ ಮಾಡಿದ್ದ ಭಾಷಣದ ಧ್ವನಿಮುದ್ರಿಕೆಯನ್ನು ಮಾರುತಿ ಚಂದರಗಿ ಅವರು ಸಿಡಿಗೆ ಪರಿವರ್ತಿಸಿದ್ದು, ಅವುಗಳನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಕರ್ನಾಟಕ ಮುಖ್ಯಸ್ಥ ರಾಘವೇಂದ್ರ ಕಾಗವಾಡ ಬಿಡುಗಡೆ ಮಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಧಾರವಾಡ ರಂಗಾಯಣ ನಿರ್ದೇಶಕ ರಮೇಶ ಪರವಿನಾಯ್ಕರ, ‘ಕ್ರಿಯಾ ಸಮಿತಿಯ ಅಭಿಯಾನದಿಂದ ಸ್ಫೂರ್ತಿ ಪಡೆದು ನಾನೂ ರಂಗಭೂಮಿಯ ಅನೇಕ ಕಲಾವಿದರಿಗೆ ಸಂಕಷ್ಟದ ಸಮಯದಲ್ಲಿ ನೆರವಿನ ಹಸ್ತ ಚಾಚಿದೆ’ ಎಂದರು.</p>.<p>ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರನ್ನು ಸನ್ಮಾನಿಸಲಾಯಿತು. ಅಭಿಯಾನದಲ್ಲಿ ಪಾಲ್ಗೊಂಡ 40 ಕಾರ್ಯಕರ್ತರು ಹಾಗೂ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರನ್ನು ಸತ್ಕರಿಸಲಾಯಿತು.</p>.<p>ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗೇನಟ್ಟಿ ಇದ್ದರು.</p>.<p>ಖುಷಿ ಢವಳಿ ಪ್ರಾರ್ಥನಾ ಗೀತೆ ಹಾಡಿದರು. ಗೋಪಾಲ ಖಟಾವಕರ ನಿರೂಪಿಸಿದರು. ಸಾಮಾಜಿಕ ಕಾರ್ಯಕರ್ತ ಶಂಕರ ಬಾಗೇವಾಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>