ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಆರೋಗ್ಯ ಇಲಾಖೆಯು ಮುಂಜಾಗ್ರತೆ ವಹಿಸಿ ಎಂದು ಹೇಳಬಹುದು, ಜನರಿಗೆ ನಿರ್ದೇಶನ ಕೊಡಬಹುದು. ಒಟ್ಟು ಸಮಾಜ ಎದುರಿಸಬೇಕಾದ ವಿಷಯವಿದು. ಒಂದು ಇಲಾಖೆ ಅಥವಾ ಒಬ್ಬ ವ್ಯಕ್ತಿ ಮಾಡುವ ಕೆಲಸವಿದಲ್ಲ. ಎಲ್ಲರೂ ಜಾಗರೂಕತೆ ವಹಿಸಬೇಕಾಗುತ್ತದೆ. ರೋಗ ಬಂದ ಮೇಲೆ ಪರಿಹಾರ ಹುಡುಕುವುದಕ್ಕಿಂತ, ಬಾರದಂತೆ ನೋಡಿಕೊಳ್ಳಬೇಕು. ಅದು ಬುದ್ಧಿವಂತ ಸಮಾಜದ ಲಕ್ಷಣ’ ಎಂದು ಪ್ರತಿಕ್ರಿಯಿಸಿದರು.