ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರನ್ನು ಕರೆದು ಸಭೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈಗ ಸರ್ವ ಪಕ್ಷ ಸಭೆ ಕರೆಯುವ ಅಗತ್ಯವೇನಿದೆ? ಕೊರೊನಾ ಸಂದರ್ಭದಲ್ಲಿ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಮಾಡಬಾರದ್ದು ಮಾಡಿ ದೇಶಕ್ಕೆ, ರಾಜ್ಯಕ್ಕೆ ಅನ್ಯಾಯ ಎಸಗಿದ್ದಾರೆ. ಈಗ ಸಭೆ ಕರೆಯುತ್ತೇವೆ ಎನ್ನುತ್ತಿದ್ದಾರೆ. ಮನಸ್ಸಿಗೆ ಬಂದಂತೆ ಸರ್ಕಾರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.