ಗೋಕಾಕ: ನಗರದ ಎರಡು ಪ್ರಾರ್ಥನಾ ಮಂದಿರಗಳಲ್ಲಿ ಗುರುವಾರ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದ ಹಲವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.
ಖಬರಸ್ತಾನ ಮಸೀದಿ ಮತ್ತು ನದಾಫ್ಗಲ್ಲಿ ಮಸೀದಿಯಲ್ಲಿ ಬಹು ಸಂಖ್ಯೆಯಲ್ಲಿ ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಮಾಡುತ್ತಿದ್ದರು. ಕೊರೊನಾ ವೈರಾಣು ಹರಡದಂತೆ ತಡೆಗಟ್ಟುವ ಹಿನ್ನೆಲೆಯಲ್ಲಿ ಜನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಾರದು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಆದೇಶ ನೀಡಿದ್ದರು.
ಈ ಆದೇಶವನ್ನು ಉಲ್ಲಂಘಿಸಿ ಹಲವು ಜನರು ಪ್ರಾರ್ಥನೆಯನ್ನು ತೊಡಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಲಘು ಲಾಠಿ ಪ್ರಹಾರ ನಡೆಸಿ, ಜನರನ್ನು ಚದುರಿಸಿದರು.