‘ದೆಹಲಿಯ ನಿಜಾಮುದ್ದೀನ್ ತಬ್ಲೀಗ್ ಧಾರ್ಮಿಕ ಸಭೆಯಲ್ಲಿ ಜಿಲ್ಲೆಯ ಒಟ್ಟು 62 ಜನರು ಭಾಗವಹಿಸಿದ್ದರು. ಅವರಲ್ಲಿ ಯಾರಿಗೂ ರೋಗದ ಲಕ್ಷಣಗಳು ಕಂಡುಬಂದಿಲ್ಲ. 42 ಜನರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 33 ಮಂದಿಯ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಗುರುವಾರ ತಿಳಿಸಿದ್ದರು.