ಬೆಳಗಾವಿ: ರಾಯಬಾಗ ಕ್ಷೇತ್ರದ ಶಾಸಕ ದುರ್ಯೋಧನ ಮಹಾಲಿಂಗಪ್ಪ ಐಹೊಳೆ ಅವರನ್ನು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಮಂಗಳವಾರ ಆದೇಶಿಸಿದೆ.
ಅವರನ್ನು ಜುಲೈ 27ರಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ, ಅವರು ಈ ಹುದ್ದೆ ಸ್ವೀಕರಿಸಿರಲಿಲ್ಲ.
‘ಖಾದಿ ನಿಗಮದಿಂದ ನಮ್ಮ ಭಾಗದ ಜನರಿಗೆ ಅನುಕೂಲ ಕಲ್ಪಿಸಲು ಆಗುವುದಿಲ್ಲ. ಅದಕ್ಕಾಗಿ ಅದನ್ನು ಸ್ವೀಕರಿಸಿಲ್ಲ. ಬೇರೆ ನಿಗಮ ನೀಡುವಂತೆ ಮುಖ್ಯಮಂತ್ರಿಯನ್ನು ಕೋರಿದ್ದೇನೆ’ ಎಂದು ತಿಳಿಸಿದ್ದರು.