‘ವಿದೇಶದಿಂದ ಕಪ್ಪು ಹಣ ವಾಪಸ್ ತರುವುದಾಗಿ ಹೇಳಲಾಗಿತ್ತು. ಪ್ರತಿಯೊಬ್ಬರ ಖಾತೆಗೆ ₹ 15 ಲಕ್ಷ ಹಾಕುವುದಾಗಿ ಭರವಸೆ ನೀಡಲಾಗಿತ್ತು. 7 ವರ್ಷದಲ್ಲಿ ₹14 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ತಿಳಿಸಲಾಗಿತ್ತು. ಆದರೆ, ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡರು. ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದ್ದರು. ಅದರೆ, ರೈತರು ಹಲವು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸೌಜನ್ಯಕ್ಕೂ ಅವರನ್ನು ಭೇಟಿಯಾಗಿಲ್ಲ. ಅವರ ಸಂಕಷ್ಟ ಆಲಿಸಿಲ್ಲ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ದರ ಗಗನಕ್ಕೇರಿದೆ. ಮೋದಿ ಹೇಳಿದ ಒಳ್ಳೆಯ ದಿನಗಳು ಎಲ್ಲಿ ಬಂದಿವೆ?’ ಎಂದು ಕೇಳಿದರು.