<p><strong>ಮೂಡಲಗಿ</strong>: ‘ಭ್ರಷ್ಟಾಚಾರವು ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಹಾಳುಮಾಡುತ್ತಿರುವ ಗಂಭೀರ ಪಿಡುಗಾಗಿದ್ದು, ಸಾರ್ವಜನಿಕರು ಭ್ರಷ್ಟಾಚಾರಕ್ಕೆ ಉತ್ತೇಜನ ನೀಡಬಾರದು’ ಎಂದು ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಹೇಳಿದರು.</p>.<p>ಅವರು ತಾಲ್ಲೂಕಿನ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಘಟಕಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಭ್ರಷ್ಟಾಚಾರ ವಿರೋಧಿ ಅರಿವು ಸಪ್ತಾಹ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಪೂರ್ವಭಾವಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.</p>.<p>ಸರ್ಕಾರಗಳ ನೀತಿ ಧೋರಣೆಯನ್ನು ರೂಪಿಸುವಲ್ಲಿ ಸಮೀಕ್ಷೆಗಳ ಪಾತ್ರ ಮಹತ್ವದ್ದಾಗಿದೆ. ಎಲ್ಲ ನಾಗರಿಕರು ಸಂಪೂರ್ಣವಾದ ಮಾಹಿತಿಯನ್ನು ಒದಗಿಸುವ ಮೂಲಕ ಸಮೀಕ್ಷೆಯನ್ನು ಯಶಸ್ವಿಯಾಗಿಸಲು ಸಹಕರಿಸಬೇಕು ಎಂದರು.</p>.<p>ಕಲ್ಲೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಿದಾನಂದ ಮುಗಳಖೋಡ ಮಾತನಾಡಿ, ವಿದ್ಯಾರ್ಥಿಗಳು ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಸುರೇಶ ಹನಗಂಡಿ ಅಧ್ಯಕ್ಷತೆ ವಹಿಸಿದ್ದರು. </p>.<p>ರಾಧಿಕಾ ಕರೆವ್ವಗೋಳ, ಡಿ.ಎಸ್. ಹುಗ್ಗಿ, ಕೆ.ಎಸ್. ಪರವ್ವಗೋಳ, ಎನ್ಎಸ್ಎಸ್ ಯೋಜನಾಧಿಕಾರಿ ಶಂಕರ ನಿಂಗನೂರ, ಮಹಾವಿದ್ಯಾಲಯದ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ</strong>: ‘ಭ್ರಷ್ಟಾಚಾರವು ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಹಾಳುಮಾಡುತ್ತಿರುವ ಗಂಭೀರ ಪಿಡುಗಾಗಿದ್ದು, ಸಾರ್ವಜನಿಕರು ಭ್ರಷ್ಟಾಚಾರಕ್ಕೆ ಉತ್ತೇಜನ ನೀಡಬಾರದು’ ಎಂದು ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಹೇಳಿದರು.</p>.<p>ಅವರು ತಾಲ್ಲೂಕಿನ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಘಟಕಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಭ್ರಷ್ಟಾಚಾರ ವಿರೋಧಿ ಅರಿವು ಸಪ್ತಾಹ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಪೂರ್ವಭಾವಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.</p>.<p>ಸರ್ಕಾರಗಳ ನೀತಿ ಧೋರಣೆಯನ್ನು ರೂಪಿಸುವಲ್ಲಿ ಸಮೀಕ್ಷೆಗಳ ಪಾತ್ರ ಮಹತ್ವದ್ದಾಗಿದೆ. ಎಲ್ಲ ನಾಗರಿಕರು ಸಂಪೂರ್ಣವಾದ ಮಾಹಿತಿಯನ್ನು ಒದಗಿಸುವ ಮೂಲಕ ಸಮೀಕ್ಷೆಯನ್ನು ಯಶಸ್ವಿಯಾಗಿಸಲು ಸಹಕರಿಸಬೇಕು ಎಂದರು.</p>.<p>ಕಲ್ಲೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಿದಾನಂದ ಮುಗಳಖೋಡ ಮಾತನಾಡಿ, ವಿದ್ಯಾರ್ಥಿಗಳು ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯ ಸುರೇಶ ಹನಗಂಡಿ ಅಧ್ಯಕ್ಷತೆ ವಹಿಸಿದ್ದರು. </p>.<p>ರಾಧಿಕಾ ಕರೆವ್ವಗೋಳ, ಡಿ.ಎಸ್. ಹುಗ್ಗಿ, ಕೆ.ಎಸ್. ಪರವ್ವಗೋಳ, ಎನ್ಎಸ್ಎಸ್ ಯೋಜನಾಧಿಕಾರಿ ಶಂಕರ ನಿಂಗನೂರ, ಮಹಾವಿದ್ಯಾಲಯದ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>