<p><strong>ಬೆಳಗಾವಿ:</strong> ಭೂಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರಿಗೆ ಸಂಪೂರ್ಣ ಪರಿಹಾರ ವಿತರಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಉಪ ವಿಭಾಗಾಧಿಕಾರಿ ಕಚೇರಿ ಜಪ್ತಿ ಮಾಡುವಂತೆ ಹಿರಿಯ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಗುರುವಾರ ಆದೇಶ ನೀಡಿದೆ.</p>.<p>‘ವಿಮಾನನಿಲ್ದಾಣದ ಅಧಿಕಾರಿಗಳ ವಸತಿ ಗೃಹಗಳ ನಿರ್ಮಾಣಕ್ಕೆಂದು 1942ರಲ್ಲಿ ಮುತಗಾ ಗ್ರಾಮ ವ್ಯಾಪ್ತಿಯ ರೈತರಿಂದ 35 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ, 30 ರೈತರಿಗೆ ಈವರೆಗೂ ಸಂಪೂರ್ಣ ಪರಿಹಾರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಎರಡು ಪ್ರಕರಣಗಳ ವ್ಯಾಜ್ಯ ನಡೆಯುತ್ತಿದೆ. ಬಡ್ಡಿ ಸೇರಿಸಿ ₹ 5 ಕೋಟಿ ಪರಿಹಾರ ನೀಡಬೇಕಾಗಿದೆ. ನಾವು, ಉಪ ವಿಭಾಗಾಧಿಕಾರಿ ಕಚೇರಿಯ ಪೀಠೋಪಕರಣಗಳು ಸೇರಿದಂತೆ ಚರಾಸ್ತಿಗಳನ್ನು ಪ್ರಕರಣದಲ್ಲಿ ಜೋಡಿಸಿದ್ದೆವು (ಅಟ್ಯಾಚ್). ಅವುಗಳನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ’ ಎಂದು ವಕೀಲ ಅಪ್ಪಾಸಾಹೇಬ ವಾಮನರಾವ ಸದರಜೋಶಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಚೇರಿಯನ್ನು ಜಪ್ತಿ ಮಾಡಿದ್ದೆವು. ಈ ನಡುವೆ, ಮೇ 25ರಂದು ಗರಿಷ್ಠ ಪರಿಹಾರ ನೀಡಲಾಗುವುದು ಎಂದು ಉಪ ವಿಭಾಗಾಧಿಕಾರಿ ಕಚೇರಿಯಿಂದ ಲಿಖಿತ ಅರ್ಜಿಯನ್ನು ನ್ಯಾಯಾಯಲಕ್ಕೆ ಸಲ್ಲಿಸಲಾಗಿತ್ತು. ಹೀಗಾಗಿ, ಜಪ್ತಿ ಮಾಡಿದ್ದ ಸಾಮಗ್ರಿಗಳನ್ನು ಅಲ್ಲೇ ಉಳಿಸಲಾಗಿದೆ. ಮುಂದಿನ ವಿಚಾರಣೆಯವರೆಗೂ ಕಾಯುತ್ತೇವೆ’ ಎಂದು ಅವರು ಮಾಹಿತಿ ನೀಡಿದರು.</p>.<p>ಪ್ರತಿಕ್ರಿಯೆ ಪಡೆಯಲು ಹಲವು ಬಾರಿ ಕರೆ ಮಾಡಿದರೂ ಉಪ ವಿಭಾಗಾಧಿಕಾರಿ ಅಶೋಕ ತೇಲಿ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಭೂಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತರಿಗೆ ಸಂಪೂರ್ಣ ಪರಿಹಾರ ವಿತರಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಉಪ ವಿಭಾಗಾಧಿಕಾರಿ ಕಚೇರಿ ಜಪ್ತಿ ಮಾಡುವಂತೆ ಹಿರಿಯ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಗುರುವಾರ ಆದೇಶ ನೀಡಿದೆ.</p>.<p>‘ವಿಮಾನನಿಲ್ದಾಣದ ಅಧಿಕಾರಿಗಳ ವಸತಿ ಗೃಹಗಳ ನಿರ್ಮಾಣಕ್ಕೆಂದು 1942ರಲ್ಲಿ ಮುತಗಾ ಗ್ರಾಮ ವ್ಯಾಪ್ತಿಯ ರೈತರಿಂದ 35 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ, 30 ರೈತರಿಗೆ ಈವರೆಗೂ ಸಂಪೂರ್ಣ ಪರಿಹಾರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಎರಡು ಪ್ರಕರಣಗಳ ವ್ಯಾಜ್ಯ ನಡೆಯುತ್ತಿದೆ. ಬಡ್ಡಿ ಸೇರಿಸಿ ₹ 5 ಕೋಟಿ ಪರಿಹಾರ ನೀಡಬೇಕಾಗಿದೆ. ನಾವು, ಉಪ ವಿಭಾಗಾಧಿಕಾರಿ ಕಚೇರಿಯ ಪೀಠೋಪಕರಣಗಳು ಸೇರಿದಂತೆ ಚರಾಸ್ತಿಗಳನ್ನು ಪ್ರಕರಣದಲ್ಲಿ ಜೋಡಿಸಿದ್ದೆವು (ಅಟ್ಯಾಚ್). ಅವುಗಳನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ’ ಎಂದು ವಕೀಲ ಅಪ್ಪಾಸಾಹೇಬ ವಾಮನರಾವ ಸದರಜೋಶಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಚೇರಿಯನ್ನು ಜಪ್ತಿ ಮಾಡಿದ್ದೆವು. ಈ ನಡುವೆ, ಮೇ 25ರಂದು ಗರಿಷ್ಠ ಪರಿಹಾರ ನೀಡಲಾಗುವುದು ಎಂದು ಉಪ ವಿಭಾಗಾಧಿಕಾರಿ ಕಚೇರಿಯಿಂದ ಲಿಖಿತ ಅರ್ಜಿಯನ್ನು ನ್ಯಾಯಾಯಲಕ್ಕೆ ಸಲ್ಲಿಸಲಾಗಿತ್ತು. ಹೀಗಾಗಿ, ಜಪ್ತಿ ಮಾಡಿದ್ದ ಸಾಮಗ್ರಿಗಳನ್ನು ಅಲ್ಲೇ ಉಳಿಸಲಾಗಿದೆ. ಮುಂದಿನ ವಿಚಾರಣೆಯವರೆಗೂ ಕಾಯುತ್ತೇವೆ’ ಎಂದು ಅವರು ಮಾಹಿತಿ ನೀಡಿದರು.</p>.<p>ಪ್ರತಿಕ್ರಿಯೆ ಪಡೆಯಲು ಹಲವು ಬಾರಿ ಕರೆ ಮಾಡಿದರೂ ಉಪ ವಿಭಾಗಾಧಿಕಾರಿ ಅಶೋಕ ತೇಲಿ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>