‘ವಿಮಾನನಿಲ್ದಾಣದ ಅಧಿಕಾರಿಗಳ ವಸತಿ ಗೃಹಗಳ ನಿರ್ಮಾಣಕ್ಕೆಂದು 1942ರಲ್ಲಿ ಮುತಗಾ ಗ್ರಾಮ ವ್ಯಾಪ್ತಿಯ ರೈತರಿಂದ 35 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ, 30 ರೈತರಿಗೆ ಈವರೆಗೂ ಸಂಪೂರ್ಣ ಪರಿಹಾರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಎರಡು ಪ್ರಕರಣಗಳ ವ್ಯಾಜ್ಯ ನಡೆಯುತ್ತಿದೆ. ಬಡ್ಡಿ ಸೇರಿಸಿ ₹ 5 ಕೋಟಿ ಪರಿಹಾರ ನೀಡಬೇಕಾಗಿದೆ. ನಾವು, ಉಪ ವಿಭಾಗಾಧಿಕಾರಿ ಕಚೇರಿಯ ಪೀಠೋಪಕರಣಗಳು ಸೇರಿದಂತೆ ಚರಾಸ್ತಿಗಳನ್ನು ಪ್ರಕರಣದಲ್ಲಿ ಜೋಡಿಸಿದ್ದೆವು (ಅಟ್ಯಾಚ್). ಅವುಗಳನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ’ ಎಂದು ವಕೀಲ ಅಪ್ಪಾಸಾಹೇಬ ವಾಮನರಾವ ಸದರಜೋಶಿ ‘ಪ್ರಜಾವಾಣಿ’ಗೆ ತಿಳಿಸಿದರು.