ಬೆಳಗಾವಿ: ‘ಲಾಕ್ಡೌನ್ನಿಂದ ಕಂಗಾಲಾಗಿರುವವರಿಗೆ ನೆರವಾಗಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ ನೇತೃತ್ವದಲ್ಲಿ ಮುಖಂಡರು ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
‘ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಎಲ್ಲ ಕುಟುಂಬಗಳಿಗೂ ಕೂಡಲೇ ಸಮಗ್ರ ದಿನಸಿಯಳ್ಳ ಕಿಟ್ಗಳನ್ನು ವಿತರಿಸಬೇಕು. ಅತಂತ್ರವಾಗಿರುವ ಕುಟುಂಬಗಳಿಗೆ ಬದುಕು ಕಟ್ಟಿಕೊಳ್ಳಲು ₹ 5 ಲಕ್ಷ ನೆರವು ಕೊಡಬೇಕು. ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಿಸುವಾಗ ವಿಶೇಷ ಸಹಾಯಧನ ನೀಡಬೇಕು’ ಎಂದು ಒತ್ತಾಯಿಸಿದರು.
‘ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು. ಕೋವಿಡ್ ಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ಕಲ್ಪಿಸಬೇಕು. ಕೋವಿಡ್ ಲಸಿಕೆ ನೀಡುವ ಅಭಿಯಾನವನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.