ಮೇ 8ರಂದು ಆರೋಗ್ಯ ಇಲಾಖೆಯು ಇವರಿಗೆ ಕೋವಿಡ್ ದೃಢಪಟ್ಟಿರುವುದನ್ನು ವರದಿ ಮಾಡಿತ್ತು. ಅವರಿಗೆ ಮನೆಯಲ್ಲಿ ಕ್ವಾರಂಟೈನ್ ಮಾಡಿ, ಹೊರಬರದಂತೆ ತಿಳಿಸಿದ್ದರು. ಆದರೆ, ಅವರು ಮೇ15ರಂದು ಗ್ರಾಮದ ಬ್ಯಾಂಕ್ಗೆ ಹೋಗಿ ಉಳಿತಾಯ ಖಾತೆಯಲ್ಲಿದ್ದ ಹಣವನ್ನು ತೆಗೆದಿದ್ದಾರೆ. ಈ ಮೂಲಕ ನಿರ್ಲಕ್ಷ್ಯ ಮಾಡಿ, ರೋಗ ಹರಡುವಂತೆ ವರ್ತಿಸಿದ್ದಾರೆ ಎಂದು ಪಿಡಿಒ ದೂರು ದಾಖಲಿಸಿದ್ದಾರೆ.