ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ‘ಎಲ್ಲ ತಾಲ್ಲೂಕು ಆಸ್ಪತ್ರೆಗಳನ್ನೂ ಕೋವಿಡ್ ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಿ ಅಗತ್ಯ ಸಿಬ್ಬಂದಿ ಹಾಗೂ ಸಲಕರಣೆಗಳನ್ನು ಪೂರೈಸಬೇಕು. ಚಿಕ್ಕೋಡಿ ಮತ್ತು ಗೋಕಾಕದಲ್ಲಿ ಕೊರೊನಾ ಪರೀಕ್ಷಾ ಪ್ರಯೋಗಾಲಯಗಳನ್ನು ಆರಂಭಿಸಬೇಕು. ಪ್ರತಿ ತಾಲ್ಲೂಕಿಗೆ ಹೆಚ್ಚುವರಿಯಾಗಿ 2 ಆ್ಯಂಬುಲೆನ್ಸ್ಗಳನ್ನು ಒದಗಿಸಿ ಕೊರತೆ ನಿವಾರಿಸಬೇಕು. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹಂತದ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು’ ಎಂದು ಕೋರಿದ್ದಾರೆ.