<p><strong>ಬೆಳಗಾವಿ</strong>: ‘ಮೂವತ್ತು ವರ್ಷಗಳಿಂದ ಅವರ ಕಾರ್ ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ಸೆ. 10ರಂದು ನಾನೇ ಸಾಂಬ್ರಾ ವಿಮಾನನಿಲ್ದಾಣಕ್ಕೆ ಹೋಗಿ ಅವರನ್ನು ಬಿಟ್ಟು ಬಂದಿದ್ದೆ. ಆದರೆ ಅವರು ವಾಪಸ್ ಬರಲೇ ಇಲ್ಲ...’</p>.<p>– ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಕಾರ್ ಚಾಲಕರಾಗಿದ್ದ ಮುದಕಪ್ಪ ನಾಯಕ ಅವರ ಪ್ರತಿಕ್ರಿಯೆ ನೀಡಿದ್ದು ಹೀಗೆ.</p>.<p>ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ದೆಹಲಿಗೆ ಹೋದ ತಕ್ಷಣವೇ ಫೋನ್ ಮಾಡಿ ಹುಷಾರಾಗಿರುವಂತೆ ನನಗೆ ಸಲಹೆ ನೀಡಿದ್ದರು. ಎಂದಿಗೂ ನನ್ನನ್ನು ಕೆಲಸದವನು ಎಂದು ಅವರು ಭಾವಿಸಿರಲಿಲ್ಲ. ಕುಟುಂಬದವರಂತೆ ಕಾಣುತ್ತಿದ್ದರು. ಅವರ ಹಠಾತ್ ನಿಧನ ನೋವು ತಂದಿದೆ’ ಎಂದು ಕಣ್ಣೀರಿಟ್ಟರು.</p>.<p>‘ಜನಸಾಮಾನ್ಯರಿರಲಿ, ಯಾರೇ ಇರಲಿ ಸಮಸ್ಯೆ ಹೇಳಿಕೊಂಡರೆ ಕೂಡಲೇ ಸ್ಪಂದಿಸುತ್ತಿದ್ದರು’ಎಂದು ನೆನದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಮೂವತ್ತು ವರ್ಷಗಳಿಂದ ಅವರ ಕಾರ್ ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ಸೆ. 10ರಂದು ನಾನೇ ಸಾಂಬ್ರಾ ವಿಮಾನನಿಲ್ದಾಣಕ್ಕೆ ಹೋಗಿ ಅವರನ್ನು ಬಿಟ್ಟು ಬಂದಿದ್ದೆ. ಆದರೆ ಅವರು ವಾಪಸ್ ಬರಲೇ ಇಲ್ಲ...’</p>.<p>– ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಕಾರ್ ಚಾಲಕರಾಗಿದ್ದ ಮುದಕಪ್ಪ ನಾಯಕ ಅವರ ಪ್ರತಿಕ್ರಿಯೆ ನೀಡಿದ್ದು ಹೀಗೆ.</p>.<p>ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ದೆಹಲಿಗೆ ಹೋದ ತಕ್ಷಣವೇ ಫೋನ್ ಮಾಡಿ ಹುಷಾರಾಗಿರುವಂತೆ ನನಗೆ ಸಲಹೆ ನೀಡಿದ್ದರು. ಎಂದಿಗೂ ನನ್ನನ್ನು ಕೆಲಸದವನು ಎಂದು ಅವರು ಭಾವಿಸಿರಲಿಲ್ಲ. ಕುಟುಂಬದವರಂತೆ ಕಾಣುತ್ತಿದ್ದರು. ಅವರ ಹಠಾತ್ ನಿಧನ ನೋವು ತಂದಿದೆ’ ಎಂದು ಕಣ್ಣೀರಿಟ್ಟರು.</p>.<p>‘ಜನಸಾಮಾನ್ಯರಿರಲಿ, ಯಾರೇ ಇರಲಿ ಸಮಸ್ಯೆ ಹೇಳಿಕೊಂಡರೆ ಕೂಡಲೇ ಸ್ಪಂದಿಸುತ್ತಿದ್ದರು’ಎಂದು ನೆನದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>