ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಅಂತಿಮ ನಮನ ಸಲ್ಲಿಸಲು ಅವರ ಆಪ್ತ ಸ್ನೇಹಿತ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ನವದೆಹಲಿಗೆ ಪ್ರಯಾಣಿಸಲಿದ್ದಾರೆ.
ಸ್ನೇಹಿತನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಸಚಿವರು ಭಾಗಿಯಾಗಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.