‘ಈ ಅಧಿಕಾರಿಯು ಕೋವಿಡ್–19 ನಿರ್ವಹಣೆ ಅನುದಾನವನ್ನು ಕಾರ್ಯಪಡೆ ಸಮಿತಿಯ ಅನುಮೋದನೆ ಪಡೆಯದೆ ದುರುಪಯೋಗ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಕುಡಚಿಯ ಬಿಜೆಪಿ ಶಾಸಕ ಪಿ. ರಾಜೀವ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿದ್ದರು. ಈ ಕಾರಣದಿಂದ ಮಾಡಲಾದ ಖರ್ಚು–ವೆಚ್ಚದ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೆ.22ರಂದು ಚಿಕ್ಕೋಡಿ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ಪರಿಶೀಲನಾ ಸಮಿತಿ ರಚಿಸಲಾಗಿತ್ತು. ಸಮಿತಿಯು ಸಲ್ಲಿಸಿದ್ದ ವರದಿ ಆಧರಿಸಿ, ಬಿಡುಗಡೆಯಾದ ಅನುದಾನದ ಕುರಿತ ಲೆಕ್ಕಪತ್ರಗಳನ್ನು ಸರಿಯಾಗಿ ನಿರ್ವಹಣೆ ಮಾಡದೆ ಮನಸೋಇಚ್ಛೆ ಖರ್ಚು ಮಾಡಿ ಕರ್ತವ್ಯ ಲೋಪ ಎಸಗಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಹೀಗಾಗಿ, ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಬಹುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.