‘₹ 1.49 ಕೋಟಿ ಅನುದಾನವನ್ನು ತಹಶೀಲ್ದಾರ್ ಸ್ವಂತ ಖಾತೆಗೆ ವರ್ಗಾಯಿಸಿಕೊಂಡು ದುರ್ಬಳಕೆ ಮಾಡಿದ್ದಾರೆ’ ಎಂದು ರಾಯಬಾಗ ತಾಲ್ಲೂಕಿನ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸಿ ಆರೋಪಿಸಿದ್ದರು. ಕೆಲವು ಸಂಘಟನೆಗಳಿಂದಲೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಚಿಕ್ಕೋಡಿ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ಬುಡಾ ಆಯುಕ್ತ, ಎಡಿಎಚ್ಒ ಒಳಗೊಂಡ ತಂಡ ರಚಿಸಿದ್ದಾರೆ. ಈ ತಂಡ ಈಚೆಗೆ ವಿಚಾರಣೆ ಆರಂಭಿಸಿದೆ.