<p><strong>ಬೆಳಗಾವಿ</strong>: ಕೋವಿಡ್–19 ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಕುರಿತು ಜಿಲ್ಲೆಯ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರ ವಿರುದ್ಧ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ವಿಚಾರಣೆ ಆರಂಭವಾಗಿದೆ.</p>.<p>‘₹ 1.49 ಕೋಟಿ ಅನುದಾನವನ್ನು ತಹಶೀಲ್ದಾರ್ ಸ್ವಂತ ಖಾತೆಗೆ ವರ್ಗಾಯಿಸಿಕೊಂಡು ದುರ್ಬಳಕೆ ಮಾಡಿದ್ದಾರೆ’ ಎಂದು ರಾಯಬಾಗ ತಾಲ್ಲೂಕಿನ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸಿ ಆರೋಪಿಸಿದ್ದರು. ಕೆಲವು ಸಂಘಟನೆಗಳಿಂದಲೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಚಿಕ್ಕೋಡಿ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ಬುಡಾ ಆಯುಕ್ತ, ಎಡಿಎಚ್ಒ ಒಳಗೊಂಡ ತಂಡ ರಚಿಸಿದ್ದಾರೆ. ಈ ತಂಡ ಈಚೆಗೆ ವಿಚಾರಣೆ ಆರಂಭಿಸಿದೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಇದೊಂದು ಆಡಳಿತಾತ್ಮಕ ಹಾಗೂ ಆಂತರಿಕ ವಿಚಾರಣೆಯಾಗಿದೆ. ಶಾಸಕರಿಂದ ದೂರು ಬಂದಿದ್ದಿರಿಂದ ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು. ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.</p>.<p>‘ಕೋವಿಡ್–19 ಸೃಷ್ಟಿಸಿರುವ ತುರ್ತು ಪರಿಸ್ಥಿತಿಯಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಸಂಕಷ್ಟಕ್ಕೆ ಒಳಗಾಗಿದ್ದ ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಬೇಕಿತ್ತು. ಅದನ್ನು ಮಾಡಿದ್ದೇನೆ. ಇದರಲ್ಲಿ ಅನುದಾನ ದುರ್ಬಳಕೆ ಹಾಗೂ ಲೋಪದೋಷ ಎಸಗಿಲ್ಲ. ಹಣ ದುರುಪಯೋಗ ಮಾಡಿಕೊಂಡಿಲ್ಲ. ಖರ್ಚು– ವೆಚ್ಚಕ್ಕೆ ಸಂಬಂಧಿಸಿದ ಲೆಕ್ಕಪತ್ರ ಹಾಗೂ ದಾಖಲೆಗಳಿವೆ. ಈ ವಿಷಯದಲ್ಲಿ ನಡೆಸಿರುವ ಸಭೆಗಳ ವಿಡಿಯೊಗಳಿವೆ. ಎಲ್ಲವನ್ನೂ ವಿಚಾರಣಾ ಸಮಿತಿಗೆ ನೀಡುತ್ತೇನೆ. ಈಗಾಗಲೇ ಕೆಲವನ್ನು ಕೊಟ್ಟಿದ್ದೇನೆ’ ಎಂದು ತಹಶೀಲ್ದಾರ್ ಭಜಂತ್ರಿ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಕೋವಿಡ್–19 ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಕುರಿತು ಜಿಲ್ಲೆಯ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರ ವಿರುದ್ಧ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ವಿಚಾರಣೆ ಆರಂಭವಾಗಿದೆ.</p>.<p>‘₹ 1.49 ಕೋಟಿ ಅನುದಾನವನ್ನು ತಹಶೀಲ್ದಾರ್ ಸ್ವಂತ ಖಾತೆಗೆ ವರ್ಗಾಯಿಸಿಕೊಂಡು ದುರ್ಬಳಕೆ ಮಾಡಿದ್ದಾರೆ’ ಎಂದು ರಾಯಬಾಗ ತಾಲ್ಲೂಕಿನ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸಿ ಆರೋಪಿಸಿದ್ದರು. ಕೆಲವು ಸಂಘಟನೆಗಳಿಂದಲೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಚಿಕ್ಕೋಡಿ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ಬುಡಾ ಆಯುಕ್ತ, ಎಡಿಎಚ್ಒ ಒಳಗೊಂಡ ತಂಡ ರಚಿಸಿದ್ದಾರೆ. ಈ ತಂಡ ಈಚೆಗೆ ವಿಚಾರಣೆ ಆರಂಭಿಸಿದೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಇದೊಂದು ಆಡಳಿತಾತ್ಮಕ ಹಾಗೂ ಆಂತರಿಕ ವಿಚಾರಣೆಯಾಗಿದೆ. ಶಾಸಕರಿಂದ ದೂರು ಬಂದಿದ್ದಿರಿಂದ ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು. ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.</p>.<p>‘ಕೋವಿಡ್–19 ಸೃಷ್ಟಿಸಿರುವ ತುರ್ತು ಪರಿಸ್ಥಿತಿಯಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದೇನೆ. ಸಂಕಷ್ಟಕ್ಕೆ ಒಳಗಾಗಿದ್ದ ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಬೇಕಿತ್ತು. ಅದನ್ನು ಮಾಡಿದ್ದೇನೆ. ಇದರಲ್ಲಿ ಅನುದಾನ ದುರ್ಬಳಕೆ ಹಾಗೂ ಲೋಪದೋಷ ಎಸಗಿಲ್ಲ. ಹಣ ದುರುಪಯೋಗ ಮಾಡಿಕೊಂಡಿಲ್ಲ. ಖರ್ಚು– ವೆಚ್ಚಕ್ಕೆ ಸಂಬಂಧಿಸಿದ ಲೆಕ್ಕಪತ್ರ ಹಾಗೂ ದಾಖಲೆಗಳಿವೆ. ಈ ವಿಷಯದಲ್ಲಿ ನಡೆಸಿರುವ ಸಭೆಗಳ ವಿಡಿಯೊಗಳಿವೆ. ಎಲ್ಲವನ್ನೂ ವಿಚಾರಣಾ ಸಮಿತಿಗೆ ನೀಡುತ್ತೇನೆ. ಈಗಾಗಲೇ ಕೆಲವನ್ನು ಕೊಟ್ಟಿದ್ದೇನೆ’ ಎಂದು ತಹಶೀಲ್ದಾರ್ ಭಜಂತ್ರಿ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>