<p><strong>ಅಥಣಿ: </strong>ಇಲ್ಲಿನ ಮಿನಿವಿಧಾನಸೌಧದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಕೊರೊನಾ ಮಾರ್ಗಸೂಚಿಗಳು ಪಾಲನೆಯಾಗಲಿಲ್ಲ. ಪಾಲ್ಗೊಂಡಿದ್ದವರು ಅಂತರ ಕಾಯ್ದುಕೊಳ್ಳಲಿಲ್ಲ.</p>.<p>‘ತಾಲ್ಲೂಕು ಆಡಳಿತ ಕೋವಿಡ್ ಮಾರ್ಗಸೂಚಿಗಳನ್ನು ಸಂಪೂರ್ಣ ಉಲ್ಲಂಘಿಸಿದೆ’ ಎಂದು ಮುಖಂಡ ಸಿದ್ದಾರ್ಥ ಶಿಂಗೆ ಮೊದಲಾದವರು ಆರೋಪಿಸಿದರು.</p>.<p>‘ಅಧಿಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಿ ಸಭೆ ನಡೆಸಿದ್ದಾರೆ. ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಕೂಡ ಮಾಡಿರಲಿಲ್ಲ’ ಎಂದು ಮುಖಂಡ ಸಂಜಯ ಕಾಂಬಳೆ ದೂರಿದರು.</p>.<p>ಕೆಲವು ಸಂಘಟನೆಗಳಿಗೆ ಮಾಹಿತಿ ನೀಡದಿದ್ದಕ್ಕೆ ಆಕ್ರೋಶ ವ್ಯಕ್ತವಾಯಿತು. ಮಾಧ್ಯಮ ಪ್ರತಿನಿಧಿಗಳಿಗೂ ಮಾಹಿತಿ ಕೊಟ್ಟಿರಲಿಲ್ಲ.</p>.<p>‘ಪಟ್ಟಣದಲ್ಲಿರುವ ಕನ್ನಡೇತರ ನಾಮಫಲಕಗಳನ್ನು ತೆರವುಗೊಳಿಸಬೇಕು’ ಎಂದು ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು.</p>.<p>ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು. ಕೋವಿಡ್ ಕಾರಣದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡದಿರಲು ನಿರ್ಧರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ: </strong>ಇಲ್ಲಿನ ಮಿನಿವಿಧಾನಸೌಧದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಕೊರೊನಾ ಮಾರ್ಗಸೂಚಿಗಳು ಪಾಲನೆಯಾಗಲಿಲ್ಲ. ಪಾಲ್ಗೊಂಡಿದ್ದವರು ಅಂತರ ಕಾಯ್ದುಕೊಳ್ಳಲಿಲ್ಲ.</p>.<p>‘ತಾಲ್ಲೂಕು ಆಡಳಿತ ಕೋವಿಡ್ ಮಾರ್ಗಸೂಚಿಗಳನ್ನು ಸಂಪೂರ್ಣ ಉಲ್ಲಂಘಿಸಿದೆ’ ಎಂದು ಮುಖಂಡ ಸಿದ್ದಾರ್ಥ ಶಿಂಗೆ ಮೊದಲಾದವರು ಆರೋಪಿಸಿದರು.</p>.<p>‘ಅಧಿಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಜನರನ್ನು ಸೇರಿಸಿ ಸಭೆ ನಡೆಸಿದ್ದಾರೆ. ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಕೂಡ ಮಾಡಿರಲಿಲ್ಲ’ ಎಂದು ಮುಖಂಡ ಸಂಜಯ ಕಾಂಬಳೆ ದೂರಿದರು.</p>.<p>ಕೆಲವು ಸಂಘಟನೆಗಳಿಗೆ ಮಾಹಿತಿ ನೀಡದಿದ್ದಕ್ಕೆ ಆಕ್ರೋಶ ವ್ಯಕ್ತವಾಯಿತು. ಮಾಧ್ಯಮ ಪ್ರತಿನಿಧಿಗಳಿಗೂ ಮಾಹಿತಿ ಕೊಟ್ಟಿರಲಿಲ್ಲ.</p>.<p>‘ಪಟ್ಟಣದಲ್ಲಿರುವ ಕನ್ನಡೇತರ ನಾಮಫಲಕಗಳನ್ನು ತೆರವುಗೊಳಿಸಬೇಕು’ ಎಂದು ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು.</p>.<p>ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು. ಕೋವಿಡ್ ಕಾರಣದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡದಿರಲು ನಿರ್ಧರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>