ಅಥಣಿ (ಬೆಳಗಾವಿ ಜಿಲ್ಲೆ): ‘ಕೋವಿಡ್ 3ನೇ ಅಲೆ ಬಾರದಂತೆ ತಡೆಯಲು ಎಲ್ಲರೂ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ರಾಷ್ಟ್ರ ಸೇವಿಕಾ ಸಮಿತಿಯ ಅಖಿಲ ಭಾರತೀಯ ಸಹಕಾರ್ಯವಾಹಿಕಾ ಅಲಕಾತಾಯಿ ಇನಾಮದಾರ ಹೇಳಿದರು.
ರಾಷ್ಟ್ರ ಸೇವಿಕಾ ಸಮಿತಿಯಿಂದ ಗುರುವಾರ ಆನ್ಲೈನ್ನಲ್ಲಿ ನಡೆದ ‘ವೈದ್ಯರ ಮಿಲನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಸೋಂಕು ಮಕ್ಕಳನ್ನು ಬಾಧಿಸುವ ವರದಿಗಳಿರುವುದರಿಂದಾಗಿ ಸಮಿತಿಯಿಂದ ತಾಯಂದಿರಿಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ. ವೈದ್ಯೆಯರ ಮೂಲಕ ಮಾರ್ಗದರ್ಶನ ಮಾಡಿಸಲಾಗುವುದು. ಯಾವ ರೀತಿ ಎಚ್ಚರಿಕೆ ವಹಿಸಬೇಕು, ಆಹಾರದಲ್ಲಿ ಯಾವ ಅಂಶಗಳ ಬಗ್ಗೆ ಕಾಳಜಿ ತೆಗೆದುಕೊಳ್ಳಬೇಕು ಎಂಬಿತ್ಯಾದಿ ವಿಷಯಗಳನ್ನು ತಿಳಿಸಲಾಗುವುದು’ ಎಂದರು.
ಸಮಿತಿಯ ಕರ್ನಾಟಕ ಉತ್ತರ ಪ್ರಾಂತ ಕಾರ್ಯವಾಹಿಕಾ ವೇದಾ ಕುಲಕರ್ಣಿ, ಸಂಪರ್ಕ ಪ್ರಮುಖರಾದ ವಾಣಿ ರಮೇಶ, ಡಾ.ಮನೀಶಾ ಭಾಂಡಣಕರ, ಡಾ.ಜ್ಯೋತಿ ಚಿಂಚಣಿಕರ, ಶಾಂಭವಿ ಅಶ್ವತ್ಥಪುರ, ಗೀತಾ ಮೇತ್ರಿ ಭಾಗವಹಿಸಿದ್ದರು.