<p><strong>ಬೆಳಗಾವಿ: </strong>ಗ್ರಾಮೀಣ ಕ್ಷೇತ್ರದ ಹಿಂಡಲಗಾ ಮತ್ತು ಬೆಳಗುಂದಿ ಗ್ರಾಮದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಂಗಳವಾರ ಚಾಲನೆ ನೀಡಿದರು.</p>.<p>‘ಕೋವಿಡ್ 2ನೇ ಅಲೆ ಪ್ರಸ್ತುತ ನಿಯಂತ್ರಣಕ್ಕೆ ಬಂದಿದೆ. ಆದರೆ, ನಾವು ಮೈಮರೆಯುವುದ ಬೇಡ. ಎಚ್ಚರಿಕೆಯಿಂದಿದ್ದು, 3ನೇ ಅಲೆ ಬಾರದಂತೆ ತಡೆಯಬೇಕು. ಅನಿವಾರ್ಯತೆ ಇದ್ದರೆ ಮಾತ್ರ ಮನೆಯಿಂದ ಹೊರಗಡೆ ಬರಬೇಕು. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>‘ಕೋವಿಡ್ ಲಸಿಕೆ ಬಗ್ಗೆ ಕೆಲವರಿಗೆ ಭಯವಿದೆ. ತೆಗೆದುಕೊಳ್ಳಲು ಹಿಂಜರಿಯುತ್ತಿದ್ದಾರೆ. ಇದು ಸಲ್ಲದು. ಭಯ ಪಡದೆ ತೆಗೆದುಕೊಂಡು ಆದಷ್ಟು ಸೋಂಕಿನಿಂದ ದೂರವಿರಬೇಕು. ಚಿಕ್ಕಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು’ ಎಂದು ತಿಳಿಸಿದರು.</p>.<p>ಡಾ.ರಾಮಕೃಷ್ಣ, ಅಶೋಕ ಗೌಡ, ಹೇಮಾ ಹಡಗಳ, ಬಾಲಕೃಷ್ಣ ಲೋಹಾರ, ಗೀತಾ ದೇಕೊಳ್ಕರ, ಪ್ರಲ್ಹಾದ ಚಿರಮುರ್ಕರ, ಸೋಮನ ಗೌಡ, ಅಶ್ವಿನಿ ಕುಂದಲ, ಟಿಎಚ್ಒ ಡಾ.ಶಿವಾನಂದ ಮಾಸ್ತಿಹೊಳಿ, ಡಾ.ರಾಜು ಕುಪ್ಳೆಕರ, ಕೃಷ್ಣ ಪಾವಸೆ, ಪ್ರಕಾಶ ಬೆಳಗುಂದಕರ, ವಿಠ್ಠಲ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಗ್ರಾಮೀಣ ಕ್ಷೇತ್ರದ ಹಿಂಡಲಗಾ ಮತ್ತು ಬೆಳಗುಂದಿ ಗ್ರಾಮದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮಂಗಳವಾರ ಚಾಲನೆ ನೀಡಿದರು.</p>.<p>‘ಕೋವಿಡ್ 2ನೇ ಅಲೆ ಪ್ರಸ್ತುತ ನಿಯಂತ್ರಣಕ್ಕೆ ಬಂದಿದೆ. ಆದರೆ, ನಾವು ಮೈಮರೆಯುವುದ ಬೇಡ. ಎಚ್ಚರಿಕೆಯಿಂದಿದ್ದು, 3ನೇ ಅಲೆ ಬಾರದಂತೆ ತಡೆಯಬೇಕು. ಅನಿವಾರ್ಯತೆ ಇದ್ದರೆ ಮಾತ್ರ ಮನೆಯಿಂದ ಹೊರಗಡೆ ಬರಬೇಕು. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಬೇಕು’ ಎಂದು ಸಲಹೆ ನೀಡಿದರು.</p>.<p>‘ಕೋವಿಡ್ ಲಸಿಕೆ ಬಗ್ಗೆ ಕೆಲವರಿಗೆ ಭಯವಿದೆ. ತೆಗೆದುಕೊಳ್ಳಲು ಹಿಂಜರಿಯುತ್ತಿದ್ದಾರೆ. ಇದು ಸಲ್ಲದು. ಭಯ ಪಡದೆ ತೆಗೆದುಕೊಂಡು ಆದಷ್ಟು ಸೋಂಕಿನಿಂದ ದೂರವಿರಬೇಕು. ಚಿಕ್ಕಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು’ ಎಂದು ತಿಳಿಸಿದರು.</p>.<p>ಡಾ.ರಾಮಕೃಷ್ಣ, ಅಶೋಕ ಗೌಡ, ಹೇಮಾ ಹಡಗಳ, ಬಾಲಕೃಷ್ಣ ಲೋಹಾರ, ಗೀತಾ ದೇಕೊಳ್ಕರ, ಪ್ರಲ್ಹಾದ ಚಿರಮುರ್ಕರ, ಸೋಮನ ಗೌಡ, ಅಶ್ವಿನಿ ಕುಂದಲ, ಟಿಎಚ್ಒ ಡಾ.ಶಿವಾನಂದ ಮಾಸ್ತಿಹೊಳಿ, ಡಾ.ರಾಜು ಕುಪ್ಳೆಕರ, ಕೃಷ್ಣ ಪಾವಸೆ, ಪ್ರಕಾಶ ಬೆಳಗುಂದಕರ, ವಿಠ್ಠಲ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>